ಬ್ರೇಕಿಂಗ್ ನ್ಯೂಸ್
19-12-21 09:19 pm HK Desk news ಕರ್ನಾಟಕ
ಶಿವಮೊಗ್ಗ, ಡಿ.19: ಸಿಟಿ ರವಿ ಬಗ್ಗೆ ಕೋಟಿ ರವಿ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ. ಅವರ ಬಗ್ಗೆ ಏನು ಹೇಳಬೇಕೋ ಅರ್ಥವಾಗುತ್ತಿಲ್ಲ. ಸಿ.ಟಿ.ರವಿ ರಾಷ್ಟ್ರೀಯ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರ ಮೇಲೆ ಒಂದೂ ಕೇಸಿಲ್ಲ. ಡಿ.ಕೆ.ಶಿವಕುಮಾರ್ ಅವರಂತೆ ಸಿ.ಟಿ.ರವಿ ಏನೂ ತಿಹಾರ್ ಜೈಲಿಗೆ ಹೋಗಿ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಿಟಿ ರವಿಯ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಗೆ ಏನು ಅಧಿಕಾರವಿದೆ. ಸಿ.ಟಿ.ರವಿ ಲೂಟಿ ರವಿ ಎನ್ನುತ್ತೀರಲ್ಲಾ.. ತಿಹಾರ್ ಜೈಲಿಗೆ ಹೋಗಿ ಬಂದವರು ನೀವು. ನಿಮ್ಮ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಇದರ ಕೇಸು ಇನ್ನೂ ನಡೆಯುತ್ತಿದೆ. ಜಾಮೀನು ಮೇಲೆ ಡಿ.ಕೆ.ಶಿವಕುಮಾರ್ ಹೊರಗಡೆ ಇದ್ದಾರೆ. ಹೀಗಿದ್ದರೂ ಸಿ.ಟಿ.ರವಿಯನ್ನು ಲೂಟಿ ರವಿ ಎನ್ನುತ್ತಾರೆ. ಡಿ.ಕೆ.ಶಿವಕುಮಾರ್ ಕೂಡಲೇ ಸಿ.ಟಿ.ರವಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೆಳಗಾವಿ ಗಲಾಟೆಗೆ ಕನ್ನಡಿಗರೇ ಕಾರಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದ ವಿಷಯಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ , ಮಹಾರಾಷ್ಟ್ರ ಸಿಎಂ ಏನೂ ದೇವರಲ್ಲ. ಕಾಂಗ್ರೆಸ್ ನವರು ಈಗ ಉತ್ತರ ಕೊಡಬೇಕು. ಮಹಾರಾಷ್ಟ್ರದಲ್ಲಿರುವುದು ಶಿವಸೇನೆ ಹಾಗೂ ಕಾಂಗ್ರೆಸ್ ಸರ್ಕಾರ ಎಂದು ಹೇಳಿದ್ದಾರೆ.
ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ನಾವು ಯಾರ ಸುದ್ದಿಗೂ ಹೋಗುವುದಿಲ್ಲ. ನಮ್ಮ ಸುದ್ದಿಗೆ ಯಾರಾದರೂ ಬಂದರೆ ಸುಮ್ಮನೆ ಬಿಡುವುದಿಲ್ಲ. ಕರ್ನಾಟಕದ ನೆಲ, ಜಲ, ಭಾಷೆ ವಿಷಯಕ್ಕೆ ಎಲ್ಲ ಪಕ್ಷಗಳು ಒಂದಾಗಿಯೇ ಇರುತ್ತೇವೆ. ಗೂಂಡಾಗಿರಿ ಮಾಡಿದ್ದು, ಕನ್ನಡದ ಧ್ವಜ ಸುಟ್ಟಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ್ದು ಮರಾಠಿಗರೇ. ಇಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಬಿಡುವುದೇ ಇಲ್ಲ. ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವುದನ್ನು ಪ್ರಧಾನಮಂತ್ರಿಗೆ ತಿಳಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
Eshwarappa slams DK Shivakumar for mocking CT Ravi. CT Ravi hasn't gone to Tihar Jail like DK Shivakumar he added.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm