ಬ್ರೇಕಿಂಗ್ ನ್ಯೂಸ್
20-12-21 01:52 pm HK Desk news ಕರ್ನಾಟಕ
ಹಾಸನ, ಡಿ.20: ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನೊಬ್ಬ ಬೈಕಿಗೆ ಡಿಕ್ಕಿಯಾಗಿ ತಾಯಿ, ಮಕ್ಕಳ ದುರಂತ ಸಾವಿಗೆ ಕಾರಣವಾದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು ಲಾರಿ ಚಾಲಕ ನಿಯಂತ್ರಣ ತಪ್ಪಿ ನುಗ್ಗಿ ಬಂದಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ, ಇಬ್ಬರು ಅವಳಿ ಮಕ್ಕಳ ಜೊತೆ ದಂಪತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದು, ಮಕ್ಕಳಿಬ್ಬರು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಕ್ಕಳನ್ನು ಮೂರು ವರ್ಷ ಪ್ರಾಯದ ಪ್ರಣತಿ ಮತ್ತು ಪ್ರಣವ್ ಎಂದು ಗುರುತಿಸಲಾಗಿದ್ದು, ದೇಹ ಸ್ಥಿತಿ ಛಿದ್ರವಾಗಿತ್ತು. ತಾಯಿ ಜ್ಯೋತಿ ಕೂಡ ಲಾರಿಯಡಿಗೆ ಬಿದ್ದು ಭೀಕರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ತಂದೆ ಶಿವಾನಂದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಒಂದೇ ಕುಟುಂಬದ ಪಾಲಿಗೆ ಲಾರಿ ಚಾಲಕ ಜವರಾಯನಾಗಿ ಬಂದೆರಗಿದ್ದಾನೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಮೇಲಿಂದಲೇ ಲಾರಿ ಚಲಿಸಿದೆ. ಅಲ್ಲದೆ, ಸ್ವಲ್ಪ ದೂರದ ವರೆಗೂ ಲಾರಿ ಚಲಿಸಿದ್ದು ಇವರನ್ನು ಎಳಕೊಂಡೇ ಚಾಲಕ ಹೋಗಿದ್ದಾನೆ. ಬೈಕ್ ಸೇರಿದಂತೆ ಇತರ ನಾಲ್ಕು ವಾಹನಗಳಿಗೆ ಲಾರಿ ಡಿಕ್ಕಿಯಾಗಿತ್ತು. ಕುಡಿದು ಟೈಟ್ ಆಗಿದ್ದ ಲಾರಿ ಚಾಲಕ ಸ್ಥಿಮಿತ ಕಳಕೊಂಡಿದ್ದ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಬಂಧಿಸಿದ್ದಾರೆ.
In a case of drunk driving, a truck driver hit several vehicles before colliding with a bike, killing three of the four riders, in Karnataka’s Hassan district. The three deceased include twins and their mother, police said. The incident took place late on Sunday, December 19. The deceased have been identified as three-year-olds Pranathi and Pranav, and their mother Jyothi. The condition of Shivanand, the deceased children's father, is said to be critical.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm