ಬ್ರೇಕಿಂಗ್ ನ್ಯೂಸ್
20-12-21 01:52 pm HK Desk news ಕರ್ನಾಟಕ
ಹಾಸನ, ಡಿ.20: ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನೊಬ್ಬ ಬೈಕಿಗೆ ಡಿಕ್ಕಿಯಾಗಿ ತಾಯಿ, ಮಕ್ಕಳ ದುರಂತ ಸಾವಿಗೆ ಕಾರಣವಾದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು ಲಾರಿ ಚಾಲಕ ನಿಯಂತ್ರಣ ತಪ್ಪಿ ನುಗ್ಗಿ ಬಂದಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ, ಇಬ್ಬರು ಅವಳಿ ಮಕ್ಕಳ ಜೊತೆ ದಂಪತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದು, ಮಕ್ಕಳಿಬ್ಬರು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಕ್ಕಳನ್ನು ಮೂರು ವರ್ಷ ಪ್ರಾಯದ ಪ್ರಣತಿ ಮತ್ತು ಪ್ರಣವ್ ಎಂದು ಗುರುತಿಸಲಾಗಿದ್ದು, ದೇಹ ಸ್ಥಿತಿ ಛಿದ್ರವಾಗಿತ್ತು. ತಾಯಿ ಜ್ಯೋತಿ ಕೂಡ ಲಾರಿಯಡಿಗೆ ಬಿದ್ದು ಭೀಕರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ತಂದೆ ಶಿವಾನಂದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಒಂದೇ ಕುಟುಂಬದ ಪಾಲಿಗೆ ಲಾರಿ ಚಾಲಕ ಜವರಾಯನಾಗಿ ಬಂದೆರಗಿದ್ದಾನೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಮೇಲಿಂದಲೇ ಲಾರಿ ಚಲಿಸಿದೆ. ಅಲ್ಲದೆ, ಸ್ವಲ್ಪ ದೂರದ ವರೆಗೂ ಲಾರಿ ಚಲಿಸಿದ್ದು ಇವರನ್ನು ಎಳಕೊಂಡೇ ಚಾಲಕ ಹೋಗಿದ್ದಾನೆ. ಬೈಕ್ ಸೇರಿದಂತೆ ಇತರ ನಾಲ್ಕು ವಾಹನಗಳಿಗೆ ಲಾರಿ ಡಿಕ್ಕಿಯಾಗಿತ್ತು. ಕುಡಿದು ಟೈಟ್ ಆಗಿದ್ದ ಲಾರಿ ಚಾಲಕ ಸ್ಥಿಮಿತ ಕಳಕೊಂಡಿದ್ದ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಬಂಧಿಸಿದ್ದಾರೆ.
In a case of drunk driving, a truck driver hit several vehicles before colliding with a bike, killing three of the four riders, in Karnataka’s Hassan district. The three deceased include twins and their mother, police said. The incident took place late on Sunday, December 19. The deceased have been identified as three-year-olds Pranathi and Pranav, and their mother Jyothi. The condition of Shivanand, the deceased children's father, is said to be critical.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm