ಬ್ರೇಕಿಂಗ್ ನ್ಯೂಸ್
22-12-21 01:08 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.22 : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್ಲು, ಬೋಗಪರ್ತಿ, ಪೆರೇಸಂದ್ರ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ. ಬೆಳಗ್ಗೆ ಏಳು ಗಂಟೆ ಸುಮಾರಿಗೆ ಎರಡು ಬಾರಿ ಭೂಕಂಪ ದಾಖಲಾಗಿರುವುದನ್ನು ಭೂಕಂಪ ಮಾಪಕ ಕೇಂದ್ರ ದೃಢಪಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ 13 ಕಿಮೀ ಉತ್ತರಕ್ಕೆ ಭೂಕಂಪದ ಕೇಂದ್ರ ಬಿಂದು ಇರುವುದಾಗಿ ಮತ್ತು ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿರುವ ಬಗ್ಗೆ ಹೇಳಿದೆ. ಬೆಳಗ್ಗೆ ಕಂಪನದ ಅನುಭವ ಆಗುತ್ತಲೇ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಬೆಳಗ್ಗೆ 7ರಿಂದ 7.30ರ ನಡುವೆ ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಗಳಲ್ಲಿ ಏನೋ ಸ್ಫೋಟ ಆಗಿರುವ ಶಬ್ದವೂ ಕೇಳಿಬಂದಿತ್ತು. ಭಾರೀ ಶಬ್ದ ಕೇಳಿದ್ದು, ಜನರಿಗೆ ಕಂಪನದ ಅನುಭವವೂ ಆಗಿದೆ. ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಅದನ್ನಗಾರಹಳ್ಳಿ, ರೆಡ್ಡಿಗೊಲ್ಲವಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಸ್ಫೋಟದ ಶಬ್ದ ಕೇಳಿಬಂದಿದೆ.
ಈ ರೀತಿ ಶಬ್ದ ಕೇಳಿರುವುದನ್ನು ಸ್ಥಳೀಯ ಕೆಲವರು ನೀರಿಲ್ಲದೆ ಒಣಗಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ಏರ್ ಬ್ಲಾಸ್ಟ್ ಆಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಹಲವಾರು ಸಮಯಗಳಿಂದ ನೀರು ಇಲ್ಲದೆ ಒಣಗಿ ಹೋಗಿದ್ದ ಬೋರ್ ವೆಲ್ ಗಳಲ್ಲಿ ಗಾಳಿ ನಿಂತಿತ್ತು. ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗಿದ್ದು, ಅಂತರ್ಜಲ ಹೆಚ್ಚಾಗಿದ್ದರಿಂದ ಜಲ ಮರುಪೂರಣ ಆಗಿ ಏರ್ ಬ್ಲಾಸ್ಟ್ ಆಗಿರುವ ಸಾಧ್ಯತೆಯಿದೆ ಎನ್ನುತ್ತಿದ್ದಾರೆ. ಈ ರೀತಿಯ ಶಬ್ದ ಹಿಂದೆಯೂ ಕೇಳಿಬಂದಿತ್ತು.
ಆದರೆ ಈ ಬಾರಿ ಇದೇ ಸಂದರ್ಭದಲ್ಲಿ ಭೂಕಂಪ ಆಗಿರುವುದನ್ನೂ ಭೂಗರ್ಭ ಶಾಸ್ತ್ರಜ್ಞರು ದೃಢಪಡಿಸಿದ್ದಾರೆ. ಕಲಬುರಗಿ, ಬೀದರ್ ಭಾಗದ ಕೆಲವೆಡೆಯೂ ಇದೇ ರೀತಿ ಕಂಪನದ ಅನುಭವ ಆಗಿತ್ತು. ಪದೇ ಪದೇ ಭಾರೀ ಸ್ಫೋಟದ ಸದ್ದು ಕೇಳಿದ್ದ ಬಗ್ಗೆ ತಜ್ಞರು ತೆರಳಿ ಅಧ್ಯಯನ ನಡೆಸಿದ್ದರು. ಭೂಕಂಪನ ಅಲ್ಲ ಎನ್ನುವ ವರದಿ ನೀಡಿದ್ದರು. ಆದರೆ, ಈಗ ಚಿಕ್ಕಬಳ್ಳಾಪುರದಲ್ಲಿಯೂ ಭಾರೀ ಮಳೆಯ ಬಳಿಕ ಅದೇ ರೀತಿಯ ಅನುಭವ ಆಗಿರುವುದು ಆತಂಕ ಮೂಡಿಸಿದೆ.
Chikkaballapura district, which is 61 km away from Bengaluru, was hit by two 3.3 magnitude earthquakes on Wednesday morning. The second one happened 5 minutes after the first.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm