ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm