ಬ್ರೇಕಿಂಗ್ ನ್ಯೂಸ್
15-09-20 02:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 15: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ನಿಗೂಢವಾಗುವತ್ತ ಸಾಗಿದೆ. ಸಿನಿತಾರೆ ರಾಗಿಣಿಯನ್ನು ಜೈಲು ಪಾಲು ಮಾಡಿರುವ ಸಿಸಿಬಿ ಪೊಲೀಸರು ಈಗ ಸ್ಟಾರ್ ದಂಪತಿಯತ್ತ ಕಣ್ಣು ಹಾಕಿದ್ದಾರೆ. ಗುಳಿಕೆನ್ನೆ ದಿಗಂತ್ ಮತ್ತು ಐಂದ್ರಿತಾ ರೇಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಕನ್ನಡ ಸಿನಿಮಾ ಲೋಕದಲ್ಲಿ ಡ್ರಗ್ಸ್ ಸದ್ದು ಮಾಡಿರುವಾಗಲೇ ನಟಿ ಐಂದ್ರಿತಾ ರೇ ಕೂಡ, ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದರು ಎನ್ನೋದು ಬಹಿರಂಗ ಆಗಿತ್ತು. ಅಲ್ಲದೆ, ಐಂದ್ರಿತಾ ರೇಗೆ ಸಂಬಂಧಿಸಿದ ವಿಡಿಯೋ, ಫೋಟೋ ವೈರಲ್ ಆಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶೇಕ್ ಫಾಝಿಲ್ ಜೊತೆ ಗುರುತಿಸಿಕೊಂಡಿದ್ದ ಫೋಟೋಗಳು ಬಹಿರಂಗ ಆಗಿದ್ದು ಬಂಗಾಳಿ ಹುಡುಗಿ ಐಂದ್ರಿತಾ ನಿದ್ದೆಗೆಡಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ರೇ, ಸಿನಿಮಾ ಪ್ರಮೋಶನ್ ಕೆಲಸಕ್ಕಾಗಿ ಕೊಲಂಬೋದ ಕ್ಯಾಸಿನೋಗೆ ಹೋಗಿದ್ದು ಹೌದು. ಚಿತ್ರದ ಪ್ರಚಾರಕ್ಕಾಗಿ ಮ್ಯಾನೇಜರ್ ಸೂಚನೆಯಂತೆ ಹೋಗಿದ್ದೆ. ಅಲ್ಲಿ ಸೊಹೈಲ್ ಮತ್ತು ಅರ್ಬಾಜ್ ಖಾನ್ ಪರಿಚಯ ಆಗಿತ್ತು. ಅದು ಬಿಟ್ಟರೆ ಶೇಖ್ ಫಾಝಿಲ್ ಬಗ್ಗೆ ನನಗೇನು ಯಾವುದೇ ಪರಿಚಯವಿಲ್ಲ ಎಂದಿದ್ದರು.
ಅರ್ಬಾಜ್ ಖಾನ್ ಜೊತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಸಂದರ್ಭದಲ್ಲಿ ಕೊಲಂಬೋಗೆ ಹೋಗಿದ್ದೇನೆ. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ಇನ್ಸ್ಟಾಗ್ರಾಂನಲ್ಲಿದ್ದು ಯಾವುದನ್ನೂ ಡಿಲೀಟ್ ಮಾಡಿಲ್ಲ. ಕ್ಯಾಸಿನೋಗೆ ಹೋಗಿದ್ದಲ್ಲದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್, ನನ್ನ ಜೊತೆ ಬಂದಿದ್ದರು ಎಂದು ವಿವರಿಸಿದ್ದರು. ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಲ್ಲಿ ಪಾರ್ಟಿ ಮಾಡಲಾಗಿತ್ತು. ಪಾರ್ಟಿ ವೇಳೆ ಫಾಝಿಲ್ ಬಂದಿದ್ದ. ಪಾರ್ಟಿಯಲ್ಲಿದ್ದಾಗ ಫಾಝಿಲ್ ಜೊತೆ ಫೋಟೋ ತೆಗೆಸಲಾಗಿತ್ತು. ಎರಡು ಬಾರಿಯೂ ಅರ್ಬಾಜ್ ಮೂಲಕವೇ ಫಾಝಿಲ್ ಭೇಟಿಯಾಗಿದ್ದೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.
ಶ್ರೀಲಂಕಾದ ಕ್ಯಾಸಿನೋಗೆ ಸಿನಿಮಾದ ತಾರೆಯರನ್ನ ಕರೆಸುತ್ತಾರೆ. ನಮಗೂ ಆಹ್ವಾನ ಬಂದಾಗ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡಿದ್ರೆ ಹೇಗೆ ಎಂದು ಐಂದ್ರಿತಾ ಪ್ರಶ್ನಿಸಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am