ಬ್ರೇಕಿಂಗ್ ನ್ಯೂಸ್
27-12-21 01:01 pm HK Desk news ಕರ್ನಾಟಕ
ರಾಯಚೂರು, ಡಿ.27 : ಮತಾಂತರ ನಿಷೇಧ ಕಾಯ್ದೆಯ ನೆಪದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಅಲೆಮಾರಿಗಳು, ಭಿಕ್ಷುಕರನ್ನು ಎಂದು ತೋರಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆರ್.ಮಾನಯ್ಯ ಎಂಬವರು ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎಸ್ಸಿ- ಎಸ್ಟಿ ಸಮುದಾಯದ ಜನರು ಹಣ, ಅಕ್ಕಿ, ಬಟ್ಟೆ ಇನ್ನಿತರ ದೇಣಿಗೆಯ ಆಮಿಷಕ್ಕೊಳಗಾಗಿ ಮತಾಂತರ ಆಗುತ್ತಿದ್ದಾರೆ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಂಬಿಸಿದ್ದು, ಆಮೂಲಕ ಅವರನ್ನು ಹೀನಾಯವಾಗಿ ತೋರಿಸಿದ್ದಾರೆ ಎಂದು ದೂರಿದ್ದಾರೆ. ಹಾಗಾಗಿ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಬಿಜೆಪಿ ಶಾಸಕರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವರು ಮಸೂದೆಯ ಉದ್ದೇಶ ಮತ್ತು ವಿವರಗಳನ್ನು ಸದನಕ್ಕೆ ಮಂಡಿಸುತ್ತಿದ್ದಾಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಅನುಮೋದಿಸಿದ್ದಾರೆ. ಈ ರೀತಿಯ ಕಾಯ್ದೆ ತಂದುದನ್ನು ಬಿಜೆಪಿ ಶಾಸಕರು ಅಭಿನಂದಿಸಿದ್ದು, ಹಾಗಾಗಿ ಜಾತಿ ನಿಂದನೆ ಮಾಡಿರುವುದರಲ್ಲಿ ಅವರ ಪಾತ್ರವೂ ಇದೆ. ಎಲ್ಲರ ವಿರುದ್ಧವೂ ಕೇಸು ದಾಖಲಿಸಬೇಕೆಂದು ಠಾಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಮಂಡಿಸಿದ್ದು, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವಿರೋಧ ನಡುವೆಯೂ ಅಂಕಿತ ಪಡೆದಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಮಂಡನೆ ಸಾಧ್ಯವಾಗಿರಲಿಲ್ಲ. ಮುಂದಿನ ಫೆಬ್ರವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಮಂಡಿಸಿ ಅನುಮತಿ ಪಡೆಯುವ ವಿಶ್ವಾಸದಲ್ಲಿ ಬಿಜೆಪಿ ಸರಕಾರ ಇದೆ.
A complaint has been lodged against the Chief Minister Basavaraj Bommai, state Home Minister Araga Jnanendra, Speaker Vishveshwara Hegde Kageri and all BJP legislators in connection with presenting of the controversial Karnataka Protection of Right to Freedom of Religion Bill, 2021 popularly known as Anti-conversion Bill.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm