ಬ್ರೇಕಿಂಗ್ ನ್ಯೂಸ್
08-01-22 07:31 pm HK Desk news ಕರ್ನಾಟಕ
ಬೆಂಗಳೂರು, ಜ.8 : ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ನೀಡುತ್ತಿರುವ ವೇತನ ಸರಕಾರ ನಿಗದಿ ಪಡಿಸಿದ ಮೂಲ ವೇತನಕ್ಕಿಂತ ಕಡಿಮೆಯಿದೆ. ದೇಶ ವಿಶ್ವಗುರು ಆಗಬೇಕು ಅನ್ನುವವರು ಉಪನ್ಯಾಸಕರನ್ನು ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11 ಸಾವಿರದಿಂದ 13 ಸಾವಿರ ಗೌರವ ಧನ ನೀಡಲಾಗುತ್ತದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆಯಿದೆ ಎಂದಿದ್ದಾರೆ.
ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಪ್ರಧಾನಿ ಮೋದಿಯವರು ಕೂಡ ಇದೇ ಮಾತನ್ನು ಹೇಳುತ್ತಾರೆ. ಭಾರತ ವಿಶ್ವಗುರು ಆಗೋದು ಅಂದರೆ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3
— H D Kumaraswamy (@hd_kumaraswamy) January 8, 2022
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
The government is implementing the national education policy. The minister of higher education says that India should become a world guru.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm