ಬ್ರೇಕಿಂಗ್ ನ್ಯೂಸ್
11-01-22 02:31 pm HK Desk news ಕರ್ನಾಟಕ
ಬೆಂಗಳೂರು, ಜ 11: ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ಅವರು ಗಳಿಸಿಕೊಂಡಿದ್ದಕ್ಕಿಂತ ಹೆಚ್ಚು ಕಳೆದುಕೊಂಡಿದ್ದಾರೆ. ಇವರು ಜನರ ಶಾಪಕ್ಕೆ ಕಾಂಗ್ರೆಸ್ ಅವರು ಒಳಗಾಗುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಕ್ಸಸ್ ಆಗಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇವರ ಪಾದಯಾತ್ರೆ ಸಾಮಾನ್ಯ ಜನರಿಗೆ ಆತಂಕವನ್ನು ತಂದಿದೆ. ಇವರಿಂದಾಗಿ ಕೇಸ್ ಉಲ್ಬಣವಾಗಿ ಲಾಕ್ಡೌನ್ ಆದರೆ ಏನು ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದರು.
ಕಾಂಗ್ರೆಸ್ ಅವರ ಪಾದಯಾತ್ರೆಗೆ ಜನ ಉಗಿಯುತ್ತಿದ್ದಾರೆ. ಜನರ ಸಹಾನುಭೂತಿ ಅವರಿಗೆ ಸಿಗಲ್ಲ. ನಿನ್ನೆ 43ಕ್ಕೂ ಅಧಿಕ ಜನರ ಮೇಲೆ ಮೇಲೆ ಪುನ: ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲಾಗಿದೆ, ಕಾನೂನು ಕ್ರಮ ಆಗುತ್ತದೆ. ಕಾನೂನು ಕ್ರಮದಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜಕೀಯ ಪಕ್ಷವಾಗಿ ಈಗ ಪಾದಯಾತ್ರೆ ಮಾಡಬಾರದಿತ್ತು. ಕಾಂಗ್ರೆಸ್ಗೆ ಖಂಡಿತಾ ಒಳ್ಳೆಯದಾಗಲ್ಲ, ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ರಾಮನಗರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದೇವೆ. ಪಾದಯಾತ್ರೆಯಿಂದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ರೇಣುಕಾಚಾರ್ಯ, ಸುಭಾಷ್ ಗುತ್ತೇದಾರರಿಂದ ಕೋವಿಡ್ ನಿಯಮ ಉಲ್ಲಂಘನೆ ವಿಚಾರವಾಗಿ ಮಾತನಾಡಿದ ಅವರು, ಅವರಿಬ್ಬರೂ ಮಾಡಿದ್ದು ಖಂಡಿತಾ ತಪ್ಪು. ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ. ಸುಭಾಷ್ ಗುತ್ತೇದಾರ್ ಅವರಿಗೂ ಹೀಗೆಲ್ಲ ಮಾಡದಂತೆ ಸೂಚಿಸಿದ್ದೇವೆ ಎಂದರು.

ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಸ್ಪರ್ಧೆ ಇದೆ. ಇಬ್ಬರ ಮಧ್ಯೆ ನಡಿಗೆ ಸ್ಪರ್ಧೆ ನಡಿಯುತ್ತಿದೆ. ನಮ್ಮ ಬೊಮ್ಮಾಯಿ ಸದ್ಯಕ್ಕೆ ಇದರ ಅಂಪೈರ್ ಆಗಿದ್ದಾರೆ. ಜನ, ಅಂಪೈರ್ ಇಬ್ಬರು ಸೇರಿ ಖಂಡಿತಾ ಇದರ ಬಗ್ಗೆ ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಡಿಕೆಶಿ ಶಾಲಾ ಮಕ್ಕಳ ಜೊತೆ ಮಾಸ್ಕ್ ಇಲ್ಲದೇ ಬೆರೆತಿದ್ದಾರೆ. ಇದು ಅಮಾನವೀಯ ಘಟನೆಯಾಗಿದೆ. ಡಿಕೆಶಿಗೆ ಟೆಸ್ಟ್ ಮಾಡಲು ಅಧಿಕಾರಿಗಳನ್ನು ಕಳಿಸಿದರೆ ಗದರಿಸಿ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲಾಕ್ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಜ್ಞರ ಅಭಿಪ್ರಾಯಗಳನ್ನು ಸರ್ಕಾರ ಎದುರು ನೋಡುತ್ತಿದೆ. ಬಹಳ ಟಫ್ ರೂಲ್ಸ್ ತರಲು ತಜ್ಞರ ಅಭಿಪ್ರಾಯವನ್ನೂ ಪರಿಗಣಿಸುತ್ತೇವೆ. ನಾಳೆ ಲಾಕ್ಡೌನ್ ಆಗುವ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಅವರೇ ಅದರ ಹೊಣೆಯನ್ನು ಹೊರಬೇಕು. ಕೇಸ್ ಹೆಚ್ಚಾದರೆ ಕಾಂಗ್ರೆಸ್ಸಿಗರೇ ಕಾರಣ ಎಂದು ತಿಳಿಸಿದರು.
Mekedatu padayatra, If Karnataka goes under lockdown congress is responsible says Home Minister. Their curse will fall upon Congress leaders he added.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm