ಬ್ರೇಕಿಂಗ್ ನ್ಯೂಸ್
11-01-22 02:31 pm HK Desk news ಕರ್ನಾಟಕ
ಬೆಂಗಳೂರು, ಜ 11: ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ಅವರು ಗಳಿಸಿಕೊಂಡಿದ್ದಕ್ಕಿಂತ ಹೆಚ್ಚು ಕಳೆದುಕೊಂಡಿದ್ದಾರೆ. ಇವರು ಜನರ ಶಾಪಕ್ಕೆ ಕಾಂಗ್ರೆಸ್ ಅವರು ಒಳಗಾಗುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಕ್ಸಸ್ ಆಗಿದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಇವರ ಪಾದಯಾತ್ರೆ ಸಾಮಾನ್ಯ ಜನರಿಗೆ ಆತಂಕವನ್ನು ತಂದಿದೆ. ಇವರಿಂದಾಗಿ ಕೇಸ್ ಉಲ್ಬಣವಾಗಿ ಲಾಕ್ಡೌನ್ ಆದರೆ ಏನು ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದರು.
ಕಾಂಗ್ರೆಸ್ ಅವರ ಪಾದಯಾತ್ರೆಗೆ ಜನ ಉಗಿಯುತ್ತಿದ್ದಾರೆ. ಜನರ ಸಹಾನುಭೂತಿ ಅವರಿಗೆ ಸಿಗಲ್ಲ. ನಿನ್ನೆ 43ಕ್ಕೂ ಅಧಿಕ ಜನರ ಮೇಲೆ ಮೇಲೆ ಪುನ: ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲಾಗಿದೆ, ಕಾನೂನು ಕ್ರಮ ಆಗುತ್ತದೆ. ಕಾನೂನು ಕ್ರಮದಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜಕೀಯ ಪಕ್ಷವಾಗಿ ಈಗ ಪಾದಯಾತ್ರೆ ಮಾಡಬಾರದಿತ್ತು. ಕಾಂಗ್ರೆಸ್ಗೆ ಖಂಡಿತಾ ಒಳ್ಳೆಯದಾಗಲ್ಲ, ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ರಾಮನಗರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದೇವೆ. ಪಾದಯಾತ್ರೆಯಿಂದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ರೇಣುಕಾಚಾರ್ಯ, ಸುಭಾಷ್ ಗುತ್ತೇದಾರರಿಂದ ಕೋವಿಡ್ ನಿಯಮ ಉಲ್ಲಂಘನೆ ವಿಚಾರವಾಗಿ ಮಾತನಾಡಿದ ಅವರು, ಅವರಿಬ್ಬರೂ ಮಾಡಿದ್ದು ಖಂಡಿತಾ ತಪ್ಪು. ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ. ಸುಭಾಷ್ ಗುತ್ತೇದಾರ್ ಅವರಿಗೂ ಹೀಗೆಲ್ಲ ಮಾಡದಂತೆ ಸೂಚಿಸಿದ್ದೇವೆ ಎಂದರು.
ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಸ್ಪರ್ಧೆ ಇದೆ. ಇಬ್ಬರ ಮಧ್ಯೆ ನಡಿಗೆ ಸ್ಪರ್ಧೆ ನಡಿಯುತ್ತಿದೆ. ನಮ್ಮ ಬೊಮ್ಮಾಯಿ ಸದ್ಯಕ್ಕೆ ಇದರ ಅಂಪೈರ್ ಆಗಿದ್ದಾರೆ. ಜನ, ಅಂಪೈರ್ ಇಬ್ಬರು ಸೇರಿ ಖಂಡಿತಾ ಇದರ ಬಗ್ಗೆ ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಡಿಕೆಶಿ ಶಾಲಾ ಮಕ್ಕಳ ಜೊತೆ ಮಾಸ್ಕ್ ಇಲ್ಲದೇ ಬೆರೆತಿದ್ದಾರೆ. ಇದು ಅಮಾನವೀಯ ಘಟನೆಯಾಗಿದೆ. ಡಿಕೆಶಿಗೆ ಟೆಸ್ಟ್ ಮಾಡಲು ಅಧಿಕಾರಿಗಳನ್ನು ಕಳಿಸಿದರೆ ಗದರಿಸಿ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲಾಕ್ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಜ್ಞರ ಅಭಿಪ್ರಾಯಗಳನ್ನು ಸರ್ಕಾರ ಎದುರು ನೋಡುತ್ತಿದೆ. ಬಹಳ ಟಫ್ ರೂಲ್ಸ್ ತರಲು ತಜ್ಞರ ಅಭಿಪ್ರಾಯವನ್ನೂ ಪರಿಗಣಿಸುತ್ತೇವೆ. ನಾಳೆ ಲಾಕ್ಡೌನ್ ಆಗುವ ಪರಿಸ್ಥಿತಿ ಬಂದರೆ ಕಾಂಗ್ರೆಸ್ ಅವರೇ ಅದರ ಹೊಣೆಯನ್ನು ಹೊರಬೇಕು. ಕೇಸ್ ಹೆಚ್ಚಾದರೆ ಕಾಂಗ್ರೆಸ್ಸಿಗರೇ ಕಾರಣ ಎಂದು ತಿಳಿಸಿದರು.
Mekedatu padayatra, If Karnataka goes under lockdown congress is responsible says Home Minister. Their curse will fall upon Congress leaders he added.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm