ಬ್ರೇಕಿಂಗ್ ನ್ಯೂಸ್
12-01-22 12:54 pm HK Desk news ಕರ್ನಾಟಕ
ರಾಮನಗರ, ಜ.12 : ಮೇಕೆದಾಟು ಯೋಜನೆ ಆಗ್ರಹಿಸಿ ಮೂರನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕನಕಪುರ ತಹಸೀಲ್ದಾರ್ ದೂರಿನಂತೆ ಕೇಸು ದಾಖಲಾಗಿದೆ.
ಮೊದಲ ಎರಡು ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮೂರನೇ ದಿನ ಮಂಗಳವಾರ ಬೆಳಗ್ಗೆ 11ರಿಂದ ಕನಕಪುರ ನಗರದ ಚನ್ನಬಸಪ್ಪ ವೃತ್ತದಿಂದ ಕನಕಪುರ ಕಸಬಾ ಹೋಬಳಿ, ಚಕ್ಕೇನಹಳ್ಳಿ ಗ್ರಾಮದ ವರೆಗೆ ರಾತ್ರಿ 9ರ ವರೆಗೆ ಜನರು ಗುಂಪುಕೂಡಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಸರಕಾರದ ನಿಮಯ ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸದೇ ಸಾರ್ವಜನಿಕರ ಆರೋಗ್ಯ, ಜೀವಕ್ಕೆ ಅಪಾಯವಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಕನಕಪುರ ತಹಸೀಲ್ದಾರ್ ವಿಶ್ವನಾಥ್, ಕನಕಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.





ಅದರಂತೆ, ಐಪಿಸಿ ಕಲಂ 141, 143, 290, 336, 149 ಅಡಿ ಪ್ರಕರಣ ದಾಖಲಾಗಿದೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಸಿದ್ದರಾಮಯ್ಯ, ರವಿ ಎಸ್., ಧ್ರುವನಾರಾಯಣ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾಧು, ಮಂಜುನಾಥ ಹುಣಸೂರು, ಸಲೀಂ ಅಹ್ಮದ್, ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮೀನಾರಾಯಣ, ಯತೀಂದ್ರ ಸಿದ್ದರಾಮಯ್ಯ, ನಲಪಾಡ್ ಹ್ಯಾರಿಸ್, ಕೋನಪ್ಪ ರೆಡ್ಡಿ, ಎಚ್.ಡಿ.ರಂಗನಾಥ್, ಬಿ.ಕೆ.ಸೋಮಶೇಖರ್, ಮುಖ್ಯಮಂತ್ರಿ ಚಂದ್ರು, ಅಂಜನ್ ಮೂರ್ತಿ, ಕೆ.ಬಿ.ಕೋಳಿವಾಡ, ಐವಾನ್ ಡಿಸೋಜ, ವಿನಯ ಕುಲಕರ್ಣಿ ಸೇರಿದಂತೆ 64 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ವಿರುದ್ಧ ಪ್ರಕರಣ ದಾಖಲಾಗಿದೆ.
Bengaluru, As the Karnataka Congress continued its ‘padayatra’ (march) demanding implementation of the Mekedatu project across the Cauvery river, for the third consecutive day on Tuesday, police registered second FIR against state party chief DK Shivakumar and several other leaders for violating Covid-19 curbs.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm