ಬ್ರೇಕಿಂಗ್ ನ್ಯೂಸ್
13-01-22 01:14 pm HK Desk news ಕರ್ನಾಟಕ
ರಾಮನಗರ, ಜ.13 : ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಮನಗರದಲ್ಲಿ ತುರ್ತು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸದ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಇಲ್ಲಿಂದಲೇ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದಾರೆ.
ಹೈಕೋರ್ಟ್ ಸೂಚನೆ ಪಾಲಿಸೋಣ. ಸದ್ಯಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡೋಣ ಎಂದು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಅದಕ್ಕೆ ಕಾಂಗ್ರೆಸ್ ಇತರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಈಮೂಲಕ ಯಾವುದೇ ಕಾರಣಕ್ಕೂ ಪಾದಯಾತ್ರೆ ಮೊಟಕುಗೊಳಿಸಲ್ಲ ಎಂದೇ ಹೇಳಿಕೊಂಡು ಬಂದಿದ್ದ ಕಾಂಗ್ರೆಸ್ ನಾಯಕರಿಗೆ ಮುಜುಗರ ಆಗಿದೆ.




ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೀಡಿದ್ದ ಸೂಚನೆ, ಮತ್ತೊಂದ್ಕಡೆ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಮನವಿ, ಇನ್ನೊಂದ್ಕಡೆ ಹೈಕೋರ್ಟ್ ಕೂಡ ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ಬಗ್ಗೆ ಗರಂ ಆಗಿದ್ದು ಕಾಂಗ್ರೆಸ್ ನಾಯಕರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಕಾರಣ ಎನ್ನಲಾಗುತ್ತಿದೆ.






ರಾಜ್ಯ ಸರಕಾರದ ಬೆದರಿಕೆ ನಡುವೆಯೂ ರಾಮನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಷ್ಟೇ ಸಂಖ್ಯೆಯಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಸಂಘರ್ಷ ಏರ್ಪಡುವ ಸಾಧ್ಯತೆಯೂ ಇತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ರಾಮನಗರದ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪಾದಯಾತ್ರೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ. ಈಗಾಗ್ಲೇ 5 ದಿನಗಳ ಪಾದಯಾತ್ರೆಯಲ್ಲಿ ಸುಮಾರು 60 ಕಿಮೀ ದೂರವನ್ನು ಕ್ರಮಿಸಿದ್ದು, ಇನ್ನು ಬಿಡದಿ ಮೂಲಕ ಬೆಂಗಳೂರು ಪ್ರವೇಶ ಆಗುವುದರಲ್ಲಿತ್ತು.
The Congress' Mekedatu rally has been called off after discussion among the leaders. Both LoP Siddaramaiah and KPCC president DK Shivakumar are likely to announce the decision in a joint press conference shortly. The leaders were instructed by central leaders as well to act wisely and not let the situation go out of hand.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm