ಬ್ರೇಕಿಂಗ್ ನ್ಯೂಸ್
13-01-22 01:14 pm HK Desk news ಕರ್ನಾಟಕ
ರಾಮನಗರ, ಜ.13 : ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಮನಗರದಲ್ಲಿ ತುರ್ತು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸದ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಇಲ್ಲಿಂದಲೇ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದಾರೆ.
ಹೈಕೋರ್ಟ್ ಸೂಚನೆ ಪಾಲಿಸೋಣ. ಸದ್ಯಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡೋಣ ಎಂದು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಅದಕ್ಕೆ ಕಾಂಗ್ರೆಸ್ ಇತರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಈಮೂಲಕ ಯಾವುದೇ ಕಾರಣಕ್ಕೂ ಪಾದಯಾತ್ರೆ ಮೊಟಕುಗೊಳಿಸಲ್ಲ ಎಂದೇ ಹೇಳಿಕೊಂಡು ಬಂದಿದ್ದ ಕಾಂಗ್ರೆಸ್ ನಾಯಕರಿಗೆ ಮುಜುಗರ ಆಗಿದೆ.




ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೀಡಿದ್ದ ಸೂಚನೆ, ಮತ್ತೊಂದ್ಕಡೆ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಮನವಿ, ಇನ್ನೊಂದ್ಕಡೆ ಹೈಕೋರ್ಟ್ ಕೂಡ ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ಬಗ್ಗೆ ಗರಂ ಆಗಿದ್ದು ಕಾಂಗ್ರೆಸ್ ನಾಯಕರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಕಾರಣ ಎನ್ನಲಾಗುತ್ತಿದೆ.






ರಾಜ್ಯ ಸರಕಾರದ ಬೆದರಿಕೆ ನಡುವೆಯೂ ರಾಮನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಷ್ಟೇ ಸಂಖ್ಯೆಯಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಸಂಘರ್ಷ ಏರ್ಪಡುವ ಸಾಧ್ಯತೆಯೂ ಇತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ರಾಮನಗರದ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪಾದಯಾತ್ರೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ. ಈಗಾಗ್ಲೇ 5 ದಿನಗಳ ಪಾದಯಾತ್ರೆಯಲ್ಲಿ ಸುಮಾರು 60 ಕಿಮೀ ದೂರವನ್ನು ಕ್ರಮಿಸಿದ್ದು, ಇನ್ನು ಬಿಡದಿ ಮೂಲಕ ಬೆಂಗಳೂರು ಪ್ರವೇಶ ಆಗುವುದರಲ್ಲಿತ್ತು.
The Congress' Mekedatu rally has been called off after discussion among the leaders. Both LoP Siddaramaiah and KPCC president DK Shivakumar are likely to announce the decision in a joint press conference shortly. The leaders were instructed by central leaders as well to act wisely and not let the situation go out of hand.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm