ಬ್ರೇಕಿಂಗ್ ನ್ಯೂಸ್
18-01-22 08:12 pm HK Desk news ಕರ್ನಾಟಕ
ಮಂಡ್ಯ, ಜ.18 : ಬಾಬರಿ ಮಸೀದಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಆದಷ್ಟು ಬೇಗ ಒಡೆದು ಹಾಕಬೇಕು. ಇಲ್ಲಿ ಹನುಮಾನ್ ದೇವಸ್ಥಾನವನ್ನು ಮಸೀದಿ ಮಾಡಲಾಗಿದೆ. ಇದನ್ನು ಒಡೆದು ಹಾಕಿ, ಮತ್ತೆ ದೇವಸ್ಥಾನ ನಿರ್ಮಾಣ ಮಾಡಬೇಕು ಎಂದು ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ಸ್ವಾಮೀಜಿ ಸ್ವತಃ ಅದೇ ಮಸೀದಿ ಎದುರಲ್ಲಿ ನಿಂತು ವಿಡಿಯೋ ಮಾಡಿದ್ದು ತಮ್ಮ ಕಾಳಿಕಾ ಮಠದ ಫೇಸ್ಬುಕ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿವಾದ ಮೈಗೆ ಎಳೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹಿಂದು ಸಂಘಟನೆಗಳು ಪ್ರತಿಭಟನಾ ಜಾಥಾ ನಡೆದಿದ್ದಾಗ ಮಸೀದಿ ಒಡೆಯುವ ಹುನ್ನಾರೆ ಇದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಉರಿಯುವ ಬೆಂಕಿಗೆ ತುಪ್ಪ ಸುರಿವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.



ಜಾಮೀಯಾ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿವೆ. ಇಲ್ಲಿನ ಶಿಲೆಗಳು ದೇವಸ್ಥಾನದ ಕಟ್ಟಡವಾಗಿರುವುದರ ಕುರುಹು. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದುಗಳು ಜಾಗರೂಕರಾಗಿ ಆದಷ್ಟು ಬೇಗ ಇದನ್ಬು ಒಡೆಯಬೇಕು ಎಂದು ಹೇಳಿ ವಿಡಿಯೋ ಮಾಡಿದ್ದರು. ಬಳಿಕ ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಲೇ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ದೇವನೂರಿನ ಕಾಳಿ ಮಠದಲ್ಲಿ ಬಂಧನ
ಹಿಂದುಗಳೇ ಮಸೀದಿಯನ್ನು ಒಡೆಯಿರಿ ಎಂದು ಕರೆ ನೀಡುವ ಮೂಲಕ ಕಾಳಿ ಸ್ವಾಮೀಜಿ ಪ್ರಚೋದನೆ ನೀಡಿದ್ದಾಗಿ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. ಕಡೂರು ತಾಲೂಕಿನ ದೇವನೂರಿನ ಕಾಳಿ ಮಠದಲ್ಲಿದ್ದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿ ಮುಂದೆ ನಿಂತು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.
Rishi kumar swamiji arrested by chikmagalur Police for derogatory video on Mosques in Mandya. A video on his Facebook went viral where he was stating that Mosques should be destroyed.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm