ಬ್ರೇಕಿಂಗ್ ನ್ಯೂಸ್
16-09-20 11:02 pm Headline Karnataka News Network ಕರ್ನಾಟಕ
ಕಲಬುರಗಿ, ಸೆಪ್ಟಂಬರ್ 16: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿ ನಾಲೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ಮಳೆ ಹಾನಿ ಪರಿಶೀಲನೆಗೆ ತೆರಳಿದ್ದ ತಹಶೀಲ್ದಾರ್ ಒಬ್ಬರು ಅಪಾಯದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಸೇತುವೆ ಮೇಲೆ ಹರಿಯುತ್ತಿದ್ದ ನದಿ ನೀರಿನಲ್ಲಿ ಕಾರು ಚಲಾಯಿಸಲೆತ್ನಿಸಿದ ತಹಶೀಲ್ದಾರ್ ಪಂಡಿತ್ ಬಿರಾದಾರ್ ಕಾರು ಕೊಚ್ಚಿ ಹೋಗಿದ್ದು ಆಪತ್ತಿಗೆ ಸಿಲುಕಿದ ತಹಸೀಲ್ದಾರ್ ಮರ ಹತ್ತಿ ಕುಳಿತಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಣಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಸೇತುವೆ ದಾಟುತ್ತಿದ್ದ ವೇಳೆ ನೀರು ಹೆಚ್ಚಿದ್ದು ಅಪಾಯ ಎದುರಾಗಿತ್ತು. ಕಾರು ನೀರಿನಲ್ಲಿ ಮುಂದೆ ಚಲಿಸಲ್ಲ ಎಂದು ತಿಳಿದ ತಹಸೀಲ್ದಾರ್ ಮತ್ತು ಚಾಲಕ ಕಾರಿನಿಂದ ಇಳಿದು ನಡೆದುಕೊಂಡು ಹೋಗಿದ್ದಾರೆ. ಆದರೆ ಪ್ರವಾಹದ ನೀರಿನಲ್ಲಿ ಹೋಗಲು ಸಾಧ್ಯವಾಗದೆ ರಕ್ಷಣೆಗಾಗಿ ಅಲ್ಲಿಯೇ ಇದ್ದ ಮರ ಹತ್ತಿದ್ದಾರೆ. ಅಲ್ಲದೆ, ಮರದಿಂದಲೇ ರಕ್ಷಣೆಗಾಗಿ ಗೋಗರೆದಿದ್ದಾರೆ. ಪೋನ್ ಮುಖಾಂತರ ಇತರ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ‘ನಾನು ಪ್ರವಾಹದಲ್ಲಿ ಸಿಲುಕಿದ್ದೇನೆ. ಮರದ ಮೇಲಿದ್ದೇನೆ’ ಎಂದು ಹೇಳಿದ್ದಾರೆ.

ಅಪಾಯದಲ್ಲಿ ಸಿಲುಕಿರುವ ಅಧಿಕಾರಿಯ ರಕ್ಷಣೆಗೆ ಕೂಡಲೇ ಪೊಲೀಸರ ತಂಡ ಧಾವಿಸಿದೆ. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಕೊನೆಗೆ ಪ್ರವಾಹದ ನೀರಿನ ಮಧ್ಯೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಸಿಕ್ಕಿಬಿದ್ದ ತಹಸೀಲ್ದಾರ್ ಅವರನ್ನು ರಕ್ಷಣಾ ಸುರಕ್ಷಿತವಾಗಿ ಪಾರು ಮಾಡಿದೆ. ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ರಕ್ಷಿಸಿ ಕರೆತಂದಿದ್ದು , ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm