ಬ್ರೇಕಿಂಗ್ ನ್ಯೂಸ್
19-01-22 10:05 pm HK Desk news ಕರ್ನಾಟಕ
ಬೆಂಗಳೂರು, ಜ.19 : ಬೆಂಗಳೂರು ಏರ್ಪೋರ್ಟ್ ನಲ್ಲಿ ಮೇಲಕ್ಕೆ ಹಾರಿದ ಎರಡು ಇಂಡಿಗೋ ವಿಮಾನಗಳು ಆಗಸದಲ್ಲಿ ಪರಸ್ಪರ ಡಿಕ್ಕಿಯಾಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ಜನವರಿ 9ರಂದು ಬೆಳಗ್ಗೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಮಾನ ಯಾನ ಸಚಿವಾಲಯ ತನಿಖೆಗೆ ಆದೇಶ ಮಾಡಿದೆ.
ಈ ಬಗ್ಗೆ ಏರ್ಪೋರ್ಟ್ ಇಂಡಿಯಾ ಅಥಾರಿಟಿ ಸಂಸ್ಥೆಯಾಗಲೀ, ಬೆಂಗಳೂರು ಏರ್ಪೋರ್ಟ್ ಸಂಸ್ಥೆಯಾಗಲೀ ವಿಷಯ ಬಹಿರಂಗ ಪಡಿಸಿಲ್ಲ. ಆದರೆ, ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಈ ಬಗ್ಗೆ ತನಿಖೆ ನಡೆಸಲು ಆದೇಶ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಕೊಲ್ಕತ್ತಾ ಹೊರಟಿದ್ದ ಇಂಡಿಗೋ ವಿಮಾನ (6E455) ಮತ್ತು ಬೆಂಗಳೂರಿನಿಂದ ಭುವನೇಶ್ವರ ಹೊರಟಿದ್ದ (6E246) ಇಂಡಿಗೋ ವಿಮಾನ 5 ನಿಮಿಷದ ಅಂತರದಲ್ಲಿ ಟೇಕ್ ಆಫ್ ಆಗಿದ್ದು, ಆಗಸದಲ್ಲಿ ವರ್ಟಿಕಲ್ ಮತ್ತು ಹಾರಿಜಂಟಲ್ ಆಗಿ ಸಾಗುವ ದಿಕ್ಕಿನಲ್ಲಿ ನಿಯಮ ಉಲ್ಲಂಘಿಸಿದೆ. ರಾಡಾರ್ ಸೂಚನೆಯನ್ನು ಉಲ್ಲಂಘಿಸಿ, ಒಂದಕ್ಕೊಂದು ಏಕಪ್ರಕಾರದಲ್ಲಿ ಸಾಗಿದ್ದವು. ಇದರಿಂದ ಕೆಲವೇ ಕ್ಷಣಗಳ ಅಂತರದಲ್ಲಿ ಆಗಸದಲ್ಲಿ ವಿಮಾನಗಳ ಡಿಕ್ಕಿಯಾಗುವ ಸಾಧ್ಯತೆ ಕಂಡುಬಂದಿದ್ದು ಸ್ವಲ್ಪದರಲ್ಲಿ ಅವಘಡ ತಪ್ಪಿತ್ತು ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಇಂಡಿಗೋ ಸಂಸ್ಥೆಯ ಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ದುಬೈ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದ್ದ ಭಾರತ ಮೂಲದ ಎರಡು ವಿಮಾನಗಳು ಇದೇ ರೀತಿ ಅಪಘಾತ ಆಗುವುದರಿಂದ ಸ್ವಲ್ಪದರಲ್ಲಿ ತಪ್ಪಿದ ಘಟನೆ ನಡೆದಿತ್ತು.
Two IndiGo planes taking off from the Kempegowda International Airport came close to colliding with each other mid-air while taking off. The flights involved in the incident were the IndiGo flights 6E 455 departing for Kolkata and 6E 246 for Bhubaneswar.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm