ಬ್ರೇಕಿಂಗ್ ನ್ಯೂಸ್
23-01-22 12:59 pm HK Desk news ಕರ್ನಾಟಕ
Photo credits : Headline Karnataka
ಮೈಸೂರು, ಜ.23 : ಮದುವೆಗೆ ವಯಸ್ಸು ಅಡ್ಡಿಯಾಗಲ್ಲ ಎಂದು ಇಲ್ಲೊಬ್ಬರು ಅಜ್ಜ - ಅಜ್ಜಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಮಾಜಕ್ಕೆ ಹೊಸ ಪಾಠ ಹೇಳಿಕೊಟ್ಟಿದ್ದಾರೆ. 65 ವರ್ಷದ ಫಾತಿಮಾ ಬೇಗಂ ಎಂಬ ಅಜ್ಜಿಯನ್ನು ಮುಸ್ತಫಾ ಎಂಬ 85 ವರ್ಷದ ಮುದುಕನೊಬ್ಬ ಕೈಹಿಡಿದು ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನ ಉದಯಗಿರಿಯ ಗೌಸಿಯಾನಗರದಲ್ಲಿ ವೃದ್ಧ ಜೋಡಿ ಕುಟುಂಬಸ್ಥರ ಸಮ್ಮುಖದಲ್ಲಿ ಪರಸ್ಪರ ಕೈಹಿಡಿದು ಹಾರ ಬದಲಾಯಿಸಿಕೊಂಡು ಸತಿ ಪತಿ ಆಗಿದ್ದಾರೆ. ಕುರಿ ಸಾಕಾಣಿಕೆ ಮಾಡುತ್ತಾ ತನ್ನ 9 ಮಕ್ಕಳಿಗೆ ಮದುವೆ ಮಾಡಿರುವ ಹಾಜಿ ಮುಸ್ತಫಾ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಪತ್ನಿ ಖುರ್ಷಿದ್ ಬೇಗಂರನ್ನು ಕಳೆದುಕೊಂಡಿದ್ದ ಮುಸ್ತಫಾ ಗೌಸಿಯಾನಗರದಲ್ಲಿ ಒಂಟಿಯಾಗಿ ವಾಸವಿದ್ದರು. ಮಕ್ಕಳಿಗೆಲ್ಲ ಮದುವೆಯಾಗಿದ್ದರಿಂದ ಒಂಟಿ ಜೀವನ ಬೇಡ ಎಂದು ಜಂಟಿಯಾಗಲು ಬಯಸಿದ್ದರು. ಇದೇ ವೇಳೆ, ಅದೇ ಏರಿಯಾದ ಫಾತಿಮಾ ಬೇಗಂ, ಮುಸ್ತಫಾ ಕಣ್ಣಿಗೆ ಬಿದ್ದಿದ್ದಳು. ಗೌಸಿಯಾ ನಗರದಲ್ಲೇ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ 65 ವರ್ಷದ ವೃದ್ದೆ ಫಾತಿಮಾ ಬೇಗಂ ಅವರನ್ನು ಮದುವೆಯಾಗಲು ಮುಸ್ತಫಾ ಮುಂದಾಗಿದ್ದು ಮದುವೆ ಪ್ರಸ್ತಾಪ ಇಟ್ಟಿದ್ದರು. ಮುಸ್ತಫಾ ಆಸೆಗೆ ನಿರಾಸೆ ಮಾಡದೆ ಫಾತಿಮಾ ಬೇಗಂ ಮದುವೆಗೆ ಒಪ್ಪಿದ್ದು ತಮ್ಮ ಇಳಿ ವಯಸ್ಸಿನಲ್ಲಿ ಜೋಡಿಯಾಗಲು ಮುಂದಾಗಿದ್ದಾರೆ.
ತಂದೆಯ ಹೊಸ ಇನ್ನಿಂಗ್ಸ್ ಆರಂಭಕ್ಕೆ ಮಕ್ಕಳು ಶುಭ ಹಾರೈಸಿದ್ದಾರೆ. ಅಜ್ಜನ ಮಾತು ಕೇಳಿ ಅಚ್ಚರಿ ಎನಿಸಿದ್ರೂ ಮಕ್ಕಳು, ಮೊಮ್ಮಕ್ಕಳು ಸೇರಿ ಇಳಿವಯಸ್ಸಿನ ನಿರ್ಧಾರಕ್ಕೆ ಜೈ ಎಂದಿದ್ದಾರೆ. ಮಕ್ಕಳೇ ಸೇರಿ ತಮ್ಮದೇ ಮನೆಯಲ್ಲಿ ನಿಖಾ ಮಾಡಿದ್ದಾರೆ. ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಫಾತಿಮಾ ಅಜ್ಜಿಯನ್ನು ವರಿಸಿದ ಮುಸ್ತಪಾ ಹೊಸ ದಾಂಪತ್ಯ ಆರಂಭಿಸಿದ್ದು ಅಚ್ಚರಿ ಮೂಡಿಸಿದೆ. ಆದರೆ ಇಳಿ ವಯಸ್ಸಿನಲ್ಲಿ ಹೆಣ್ಣಿನ ಆಸರೆ ಬಯಸಿದ ಮುಸ್ತಫಾ ದಿಟ್ಟ ನಿರ್ಧಾರಕ್ಕೆ ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ.
Mysuru 85 year old Muslim Man marries a 64-year-old woman. The Marrige took place in the presence of their entire families.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm