ಬ್ರೇಕಿಂಗ್ ನ್ಯೂಸ್
24-01-22 01:02 pm HK Desk news ಕರ್ನಾಟಕ
ಶಿವಮೊಗ್ಗ, ಜ.24 : ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಬಸ್ ಮಾಲೀಕ ಪ್ರಕಾಶ್ ಶರಾವತಿ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸತತ ಕೊರೊನಾ ಲಾಕ್ಡೌನ್ ಕಾರಣದಿಂದ ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಜ.21ರಂದು ರಾತ್ರಿ ಪ್ರಕಾಶ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಕಾರಿನಲ್ಲಿ ಮೊಬೈಲ್ ಕೂಡ ಇದ್ದುದು ಅನುಮಾನಕ್ಕೆ ಕಾರಣವಾಗಿತ್ತು. ಪಟಗುಪ್ಪೆ ಸೇತುವೆ ಬಳಿಯಿಂದಲೇ ಶರಾವತಿ ಹಿನ್ನೀರು ಇದ್ದು , ಅಲ್ಲಿಂದ ಉದ್ದಕ್ಕೆ ಸರೋವರದಲ್ಲಿ ಹುಡುಕಾಟ ನಡೆಸಲಾಗಿತ್ತು. ಕಳೆದ ಮೂರು ದಿನಗಳಿಂದ ಸ್ಥಳೀಯರು, ಅಗ್ನಿಶಾಮಕ ದಳ, ಪೊಲೀಸರು ಸೇರಿ ಹುಡುಕಾಟ ನಡೆಸಿದ್ದು, ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಪಟಗುಪ್ಪೆ ಸೇತುವೆ ಬಳಿಯೇ ಶರಾವತಿ ನದಿಯ ಬದಿಯಲ್ಲೇ ಶವ ಪತ್ತೆಯಾಗಿದೆ.

ಪ್ರಕಾಶ್ ಟ್ರಾವೆಲ್ಸ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಹೆಸರು ಪಡೆದಿದ್ದ ಪ್ರಕಾಶ್ ಅವರು ಹೊಸನಗರ, ಸಾಗರ, ಶಿವಮೊಗ್ಗ ಭಾಗದಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಗಳನ್ನು ಓಡಿಸುತ್ತಿದ್ದರು. 40ಕ್ಕೂ ಅಧಿಕ ಬಸ್ ಗಳನ್ನು ಓಡಿಸುತ್ತಿದ್ದರಿಂದ ಪ್ರಕಾಶ್ ಜನಮೆಚ್ಚುಗೆ ಪಡೆದಿದ್ದರು. ಶಿವಮೊಗ್ಗ – ಬೆಂಗಳೂರು, ಸಾಗರ – ಬೆಂಗಳೂರು ಹೀಗೆ ಪ್ರಕಾಶ್ ಟ್ರಾವೆಲ್ಸ್ ಬಸ್ ಗಳು ಓಡಾಟ ನಡೆಸುತ್ತಿದ್ದವು. ಬಸ್ಸಿಗಾಗಿ ಲಕ್ಷಾಂತರ ಸಾಲ ಪಡೆದಿದ್ದಾರೆ ಎನ್ನಲಾದ ಪ್ರಕಾಶ್, ಕೊರೊನಾ ಬಿಕ್ಕಟ್ಟಿನಿಂದಾಗಿ ಪದೇ ಲಾಕ್ಡೌನ್ ಆಗಿದ್ದರಿಂದ ಸಂಕಷ್ಟಕ್ಕೆ ಒಳಗಾಗಿದ್ದರು.
ಕರಾವಳಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಗಳಿದ್ದು, ಕೊರೊನಾ ಲಾಕ್ಡೌನ್ ಕಾರಣದಿಂದ ಭಾರೀ ಸಂಕಷ್ಟಕ್ಕೆ ತುತ್ತಾಗಿದೆ. ಸಾಲ ಬಾಧೆಯಿಂದ ನೊಂದು ತನ್ನ ಕಾರನ್ನು ಶರಾವತಿ ನದಿಯ ಸೇತುವೆಯಲ್ಲೇ ನಿಲ್ಲಿಸಿ, ನದಿಗೆ ಹಾರಿದ್ದರು ಎನ್ನಲಾಗಿದೆ. ಶವವನ್ನು ಪೋಸ್ಟ್ ಮಾರ್ಟಂ ನಡೆಸಲು ಪೊಲೀಸರು ಶಿವಮೊಗ್ಗಕ್ಕೆ ಒಯ್ದಿದ್ದಾರೆ. ಪ್ರಕಾಶ್ ನಾಪತ್ತೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸ್ ದೂರು ದಾಖಲಿಸಿದ್ದರು.
Shivamogga Prakash Travels Bus Owner of Sagara found dead in river, body fond. He owned around 40 tourist buses. Due to lockdown he was very much in loss for which he took the extreme decision of suicide.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm