ಬ್ರೇಕಿಂಗ್ ನ್ಯೂಸ್
27-01-22 08:17 pm HK Desk news ಕರ್ನಾಟಕ
ಬೆಂಗಳೂರು, ಜ. 27 : ಭಾರೀ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಗುರಿಯಾಗಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿ ಹುದ್ದೆಯಿಂದ ತೆರವುಗೊಳಿಸಿ, ಎತ್ತಂಗಡಿ ಮಾಡಲಾಗಿದೆ.
ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ದೂರಿನ ಪ್ರತಿ ಹೊರ ಬಿದ್ದ ಬೆನ್ನಲ್ಲೇ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಬಳಿಕ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ. ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.
ಇದೀಗ ಏಕಾಏಕಿ ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ಚನ್ನಣ್ಣವರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗದ ಜನರ ಕಲ್ಯಾಣ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಎಂಡಿ ಅವರ ಮೇಲಿರುತ್ತದೆ.

ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ ಅವರನ್ನು ಪೂರ್ವ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಅಬ್ದುಲ್ ಅಹಾದ್ ಅವರನ್ನು ಕೆಎಸ್ಆರ್ಟಿಸಿ ಭದ್ರತೆ ಮತ್ತು ಜಾಗೃತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೊಪ್ಪಳದ ಎಸ್ಪಿ ಟಿ. ಸುಧೀರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕಾರಾಗೃಹ ಇಲಾಖೆಯ ಎಸ್ಪಿ ಟಿ.ಪಿ. ಶಿವಕುಮಾರ್ ಅವರನ್ನು ಚಾಮರಾಜ ನಗರ ಜಿಲ್ಲೆ ಎಸ್ಪಿ ಹುದ್ದೆಗೆ ವರ್ಗ ಮಾಡಲಾಗಿದೆ. ಅದೇ ರೀತಿ ಚಾಮರಾಜನಗರ ಎಸ್ಪಿ ಆಗಿದ್ದ ದಿವ್ಯ ಸಾರಾ ಥಾಮಸ್ ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ಹುದ್ದೆಗೆ ನಿಯೋಜಿಸಲಾಗಿದೆ. ಹುದ್ದೆಗಾಗಿ ಕಾಯುತ್ತಿದ್ದ ಡೆಕ್ಕ ಕಿಶೋರ್ ಬಾಬು ಬೀದರ್ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ. ಅರುಣಾಂಶು ಗಿರಿ ಅವರನ್ನು ಕೊಪ್ಪಳದ ಎಸ್ಪಿಯನ್ನಾಗಿ ವರ್ಗ ಮಾಡಲಾಗಿದೆ. ಬೀದರ್ ಎಸ್ಪಿಯಾಗಿದ್ದ ನಾಗೇಶ್ ಡಿ.ಎಲ್. ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
9 IPS officers including Ravi D channannavar transferred by Karnataka Govt. Recently crores of corruption charges have been alleged by Advocate Jagadish on a Facebook video against Ravi D.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm