ಬ್ರೇಕಿಂಗ್ ನ್ಯೂಸ್
28-01-22 09:38 pm HK Desk news ಕರ್ನಾಟಕ
ಬೆಂಗಳೂರು, ಜ.28 : ಕೆಎಂಎಫ್ ಹಾಗೂ ನಂದಿನಿ ತುಪ್ಪದ ಬ್ರಾಂಡಿನಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಜಾಲವನ್ನು ಕೆಎಂಎಫ್ ಅಧಿಕಾರಿಗಳು ಬೆಂಗಳೂರು ನಗರದಲ್ಲಿ ಪತ್ತೆ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಸಿ, ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ನಂದಿನಿ ಬ್ರಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬೆಂಗಳೂರಿನ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಹನುಮಂತನಗರ, ಹೊಸನಗರ, ಮಾಕಳಿ, ಹೊಸಕೋಟೆ, ಜಯನಗರ, ನೆಲಮಂಗಲ, ಮಾಕಳಿ ಸೇರಿದಂತೆ ವಿವಿಧ ಕಡೆ ಅಧಿಕಾರಿಗಳು ಅಂಗಡಿಗಳಿಗೆ ದಾಳಿ ನಡೆಸಿದ್ದು, ನಕಲಿ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ.
ಅಂಗಡಿಗಳಲ್ಲಿ ಸಿಕ್ಕ ನಕಲಿ ತುಪ್ಪದ ಜಾಡು ಹಿಡಿದು ತುಪ್ಪದ ಗೋದಾಮುಗಳಿಗೂ ದಾಳಿ ನಡೆಸಿರುವ ಅಧಿಕಾರಿಗಳು ಭಾರೀ ಪ್ರಮಾಣದ ನಕಲಿ ಜಾಲವನ್ನು ಬಯಲಿಗೆಳೆದಿದ್ದಾರೆ. ನಂದಿನಿ ಹೆಸರಿನಲ್ಲಿರುವ ಒಂದು ಕೇಜಿ ಹಾಗೂ 15 ಕೇಜಿ ತೂಕದ ತುಪ್ಪದ ಟಿನ್ ಗಳನ್ನು ಪಡೆದು ಅದನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳಿಸಿಕೊಡಲಾಗಿದೆ. ವಿವಿಧ ಮಾದರಿಯ ನಕಲಿ ತುಪ್ಪದ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದು ಕೆಎಂಎಫ್ ಪ್ರಯೋಗಾಲಯಕ್ಕೆ ಗುಣಮಟ್ಟದ ಪರಿಶೀಲನೆಗಾಗಿ ಕಳಿಸಲಾಗಿದೆ. ಈ ವೇಳೆ, ನಕಲಿಯಾಗಿರುವುದು ಕಂಡುಬಂದಿದ್ದು, ಕೆಎಂಎಫ್ ಮಾರ್ಕೆಟಿಂಗ್ ವಿಭಾಗದ ಬಿ.ಪಿ. ಸುರೇಶ್ ಪೊಲೀಸ್ ದೂರು ನೀಡಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿದ್ದು, ನಕಲಿ ತುಪ್ಪದ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ. ಅತಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ನಂದಿನಿ ತುಪ್ಪವನ್ನು ನೀಡುತ್ತಿರುವ ಕೆಎಂಎಫ್ ಗೆ ಇದೀಗ ನಕಲಿ ತುಪ್ಪದ ಬಿಸಿ ತಟ್ಟಿದೆ.
Bangalore, A fake ghee (Ghee) case has been found in Bengaluru city after Mysore. Kmf(KMF) officials, who detected a fake ghee network in the city, said the fake ghee produced in Mysore was being sold in and around Bengaluru. Officials suspected of fake ghee in Bengaluru and kmf has formed several teams to find fake ghee. Therefore, officials have conducted inspections in several places including Bengaluru city.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm