ಬ್ರೇಕಿಂಗ್ ನ್ಯೂಸ್
30-01-22 12:05 pm HK Desk news ಕರ್ನಾಟಕ
ಮೈಸೂರು, ಜ.30 : ರಾಯಚೂರಿನಲ್ಲಿ ನ್ಯಾಯಾಧೀಶರೊಬ್ಬರು ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಘಟನೆ ಬಗ್ಗೆ ರಾಜ್ಯ ಸರಕಾರ ತನಿಖೆ ನಡೆಸಬೇಕು. ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿಸಬೇಕು ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಆಗ್ರಹಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ದೇಶ ಎಂದಿಗೂ ಒಂದಾಗಿರಲಿಲ್ಲ. ಹಾಗಾಗಿಯೇ ಈ ದೇಶದ ಮೇಲೆ ಎಲ್ಲರು ದಾಳಿ ಮಾಡಿದರು. ಆದರೆ ಸರಿಯಾದ ಆಡಳಿತವನ್ನ ಕಲಿಸಿಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್. ಆದರೆ ರಾಯಚೂರಿನಲ್ಲಿ ನಡೆದ ಘಟನೆ ಸರಿಯಾದುದ್ದಲ್ಲ. ನನಗೆ ತುಂಬ ನೋವು ತಂದಿದೆ. ಘಟನೆ ಬಗ್ಗೆ ಸಾಕಷ್ಟು ಪ್ರತಿಭಟನೆ ಆಗಿದೆ. ಸ್ವತಃ ನ್ಯಾಯಾಧೀಶರು ಕೂಡ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಗಣರಾಜ್ಯೋತ್ಸವ ಹಾಗೂ ಅಂಬೇಡ್ಕರ್ ಅವರ ಬಗ್ಗೆ ಜಿಲ್ಲಾ ನ್ಯಾಯಾಧೀಶರು ತಿಳಿದುಕೊಂಡಿಲ್ಲ ಅನ್ನುವುದನ್ನು ನಂಬಲಾಗದು ಎಂದರು.
ಇದನ್ನು ಉದ್ದೇಶಪೂರ್ವಕ ಮಾಡಿದ್ದಾರಾ? ನ್ಯಾಯಾಲಯ ಎಲ್ಲೆಡೆ ಗಾಂಧೀಜಿ, ನೆಹರು, ಅಂಬೇಡ್ಕರ್ ಅವರ ಫೋಟೋ ಇಟ್ಟುಕೊಂಡಿದೆ. ಇಟ್ಟುಕೊಳ್ಳುವುದು ಬೇಡ ಎಂದಾದರೆ ಬೇಡ. ಆದರೆ ಹಾಕಿಕೊಂಡ ಬಳಿಕ ಅದನ್ನ ತೆಗೆಸುವುದು ದೊಡ್ಡ ತಪ್ಪು. ಇದು ಒಬ್ಬ ಜಿಲ್ಲಾ ನ್ಯಾಯಾಧೀಶರಾದವರಿಗೆ ಶೋಭೆ ತರುವಂತದಲ್ಲ. ಹೈಕೋರ್ಟ್ ಈ ಬಗ್ಗೆ ಸಮಗ್ರ ತನಿಖೆ ಮಾಡಿಸಬೇಕು. ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಹೈಕೋರ್ಟ್ ಇದನ್ನ ಸ್ವಯಂ ಪ್ರಕರಣದ ಮೂಲಕ ವಿಚಾರಣೆ ಮಾಡಬೇಕು ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.
ರಾಜ್ಯ ಸರ್ಕಾರ ಕೂಡ ಈ ಬಗ್ಗೆ ವಿಚಾರಣೆ ಮಾಡಿಸಬೇಕು. ವಿಚಾರಣೆ ನಡೆಸಿ ವರದಿಯನ್ನ ಹೈಕೋರ್ಟ್ಗೆ ನೀಡಬೇಕು. ನನಗೆ ಈ ಪ್ರಕರಣದಿಂದ ತುಂಬ ನೋವಾಗಿದೆ. ನನಗೆ ಅನಾರೋಗ್ಯ ಇದ್ದರು ಸಹ ನಿಮ್ಮ ಮುಂದೆ ಈ ಮಾತನ್ನ ಹಂಚಿಕೊಂಡಿದ್ದೇನೆ. ಸರ್ಕಾರ ಈ ಬಗ್ಗೆ ಮಾತಾಡಿಲ್ಲ, ಮೌನವಾಗಿದೆ ಅಂದರೆ ಈಗ ಕ್ರಮ ತೆಗೆದುಕೊಳ್ಳಲಿ. ಈ ಬಗ್ಗೆ ನಾನು ಒತ್ತಾಯ ಮಾಡುತ್ತೇನೆ. ಅದರಲ್ಲು ವಿಶೇಷವಾಗಿ ಕಾನೂನು ಸಚಿವರು ಮಾತಾಡಬೇಕು. ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಬೇಕು.
ಆರೋಗ್ಯ ಚೆನ್ನಾಗಿರುತ್ತಿದ್ದರೆ ಈ ಬಗ್ಗೆ ಖುದ್ದಾಗಿ ಭೇಟಿಯಾಗಿ ಒತ್ತಾಯ ಮಾಡುತ್ತಿದ್ದೆ. ಆದರೆ ಆರೋಗ್ಯ ಸಮಸ್ಯೆ ಇರುವುದರಿಂದ ಈ ಬಗ್ಗೆ ಕಾನೂನು ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
Mysuru Insult to Ambedkar by Judge in Raichur, Srinivas prasad demands for action.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm