ಬ್ರೇಕಿಂಗ್ ನ್ಯೂಸ್
30-01-22 12:22 pm HK Desk news ಕರ್ನಾಟಕ
ತುಮಕೂರು, ಜ 30: ಕಾರು ಖರೀದಿಗೆ ಹೋಗಿದ್ದ ವೇಳೆ ಅವಮಾನಕ್ಕೆ ಒಳಗಾಗಿದ್ದ ತುಮಕೂರು ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸುವ ಮೂಲಕ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಶುಭಕೋರಿದ್ದಾರೆ.
ಟ್ವೀಟ್ ಮೂಲಕ ರೈತನಿಗೆ ಶುಭಕೋರಿರುವ ಆನಂದ್ ಮಹೀಂದ್ರಾ ನಮ್ಮ ಮಹೀಂದ್ರಾ ಕುಟುಂಬಕ್ಕೆ ಸುಸ್ವಾಗತ ಎಂದು ಹೇಳಿದ್ದಾರೆ. ಕಳೆದ ಜನವರಿ 21 ರಂದು ಗೂಡ್ಸ್ ಜೀಪ್ ಖರೀದಿಸಲು ಹೆಬ್ಬೂರು ಹೋಬಳಿಯ ರಾಮನಪಾಳ್ಯದ ಯುವರೈತ ಕೆಂಪೇಗೌಡ, ತುಮಕೂರಿನ ಮಹೀಂದ್ರಾ ಶೋರೂಂಗೆ ಬಂದಿದ್ದ. ಈ ವೇಳೆ ಆತನ ವೇಷಭೂಷಣ ನೋಡಿ ಶೋ ರೂಂ ಸಿಬ್ಬಂದಿ ಅವಮಾನ ಮಾಡಿದ್ದರು. ಆತನ ಸ್ನೇಹಿತರಿಗೂ ಅವಮಾನಿಸಿದ್ದರು.
ಶೋರೂಂ ಸಿಬ್ಬಂದಿ ಅವಮಾನ ಮಾಡಿದ್ದಕ್ಕೆ ಕೇವಲ ಅರ್ಧ ಗಂಟೆಯಲ್ಲಿ 10 ಲಕ್ಷ ರೂ. ಹಣ ತಂದು ಸಿಬ್ಬಂದಿ ಮುಂದಿಟ್ಟಿದ್ದ. ಇದನ್ನು ನೋಡಿದ ಶೋರೂಂ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದರು. ಈ ಘಟನೆ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿ, ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

ಇದರ ಬೆನ್ನಲ್ಲೆ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಟ್ವಿಟ್ ಮೂಲಕ ರೈತನಿಗೆ ಕ್ಷಮೆಯಾಚಿಸಿದ್ದರು. ಇದೀಗ ರೈತ ಕೆಂಪೇಗೌಡನ ಮನೆ ಬಾಗಿಲಿಗೆ ಮಹೀಂದ್ರಾ ಗೂಡ್ಸ್ ಜಿಪ್ ಡೆಲಿವರಿ ಮಾಡುವ ಮೂಲಕ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ. ಅಲ್ಲದೆ, ನಮ್ಮ ಕುಟುಂಬಕ್ಕೆ ಸ್ವಾಗತ ಎಂದು ಹೇಳಿದ್ದಾರೆ.
ಜನವರಿ 21ರಂದು ನಮ್ಮ ಡೀಲರ್ ಬಳಿ ಕೆಂಪೇಗೌಡ ಮತ್ತು ಆತನ ಸ್ನೇಹಿತರು ಬಂದಾಗ ನಡೆದ ಘಟನೆಗೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ನಾವು ಭರವಸೆ ನೀಡಿದಂತೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಮಹೀಂದ್ರಾ ಆಯ್ಕೆ ಮಾಡಿದ್ದಕ್ಕಾಗಿ ನಾವು ಕೆಂಪೇಗೌಡರಿಗೆ ಧನ್ಯವಾದ ಅರ್ಪಿಸುತ್ತೇವೆ. ನಾವು ಅವರನ್ನು ಮಹೀಂದ್ರಾ ಕುಟುಂಬಕ್ಕೆ ಸ್ವಾಗತಿಸುತ್ತೇವೆ ಎಂದು ಟ್ವೀಟ್ ಮೂಲಕ ಮಹೀಂದ್ರಾ ಆಟೋಮೋಟಿವ್ ತಿಳಿಸುವ ಮೂಲಕ ವಿವಾದಕ್ಕೆ ಸುಖಾಂತ್ಯ ಆಡಿದೆ.
Here is our official update with reference to the incident that happened at one of our dealers' showrooms in Tumukur, Karnataka. https://t.co/m1lTpObXVC pic.twitter.com/etzQTonykP
— Mahindra Automotive (@Mahindra_Auto) January 28, 2022
Industrialist Anand Mahindra has heartily welcomed the farmer who had been reportedly humiliated at an SUV showroom in Tumukur, Karnataka, into the Mahindra & Mahindra family.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm