ಬ್ರೇಕಿಂಗ್ ನ್ಯೂಸ್
17-09-20 04:37 pm Bangalore Correspondent ಕರ್ನಾಟಕ
ಬೆಂಗಳೂರು, ಸಪ್ಟೆಂಬರ್ 17: ಕೊರೊನಾ ಬಾಧಿತರಾಗಿ ತೀವ್ರ ನಿಗಾ ಘಟಕದಲ್ಲಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ(55) ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್ ಗಸ್ತಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಉಳಿಸಲಾಗಿತ್ತು. ನಿನ್ನೆ ಸಂಜೆ ಹೊತ್ತಿಗೆ ಗಸ್ತಿಯವರು ಸಾವನ್ನಪ್ಪಿದ್ದಾಗಿ ಸುದ್ದಿಗಳು ಹರಿದಾಡಿದ್ದವು. ಬಳಿಕ ರಾಜ್ಯ ಬಿಜೆಪಿ ಮತ್ತು ಆಸ್ಪತ್ರೆಯ ವೈದ್ಯರು ಅಶೋಕ್ ಗಸ್ತಿಯವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ. ದೇಹ ಸ್ಥಿತಿ ಗಂಭೀರವಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಸಾವನ್ನಪ್ಪಿದ ಸುದ್ದಿ ಬರಿಯ ವದಂತಿ ಅಷ್ಟೇ ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿತ್ತು. ಆದರೆ, ರಾತ್ರಿ 11 ಗಂಟೆ ವೇಳೆಗೆ ಆಸ್ಪತ್ರೆಯ ವೈದ್ಯರು ಹೇಳಿಕೆ ಬಿಡುಗಡೆ ಮಾಡಿದ್ದು ಅಶೋಕ್ ಗಸ್ತಿಯವರನ್ನು ಉಳಿಸಲು ಬಹಳಷ್ಟು ಪ್ರಯತ್ನ ಮಾಡಲಾಯಿತು. ಕೊರೊನಾ ಜೊತೆ ನ್ಯುಮೋನಿಯಾ ಬಾಧಿಸಿದ್ದರಿಂದ ಬಹು ಅಂಗಾಂಗ ವೈಫಲ್ಯಕ್ಕೀಡಾಗಿದ್ದರು. ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರು ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯ ಮೂಲದ ಅಶೋಕ್ ಗಸ್ತಿ ಬಿಜೆಪಿಯ ಶಿಸ್ತಿನ ಕಾರ್ಯಕರ್ತರಾಗಿದ್ದರು. ಅತ್ಯಂತ ಹಿಂದುಳಿದ ಸವಿತಾ ಸಮಾಜದವರಾಗಿದ್ದ ಗಸ್ತಿಯವರ ಪಕ್ಷ ನಿಷ್ಠೆ ಮತ್ತು ಸುದೀರ್ಘ ಸೇವೆಯನ್ನು ಪರಿಗಣಿಸಿ, ಅವರನ್ನು ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ಉದ್ಯಮಿಗಳು, ಹಣ ಇದ್ದವರು ಮಾತ್ರ ರಾಜ್ಯಸಭೆಗೆ ಹೋಗುತ್ತಿದ್ದ ಕಾಲದಲ್ಲಿ ಅಶೋಕ್ ಗಸ್ತಿಯವರಂತಹ ಬಡ ಕಾರ್ಯಕರ್ತನನ್ನು ಬಿಜೆಪಿ ಪರಿಗಣಿಸಿದ್ದು ಚರ್ಚೆಗೆ ಕಾರಣವಾಗಿತ್ತು.
ಅಶೋಕ ಗಸ್ತಿ ಅವರಿಗೆ ಸೆಪ್ಟೆಂಬರ್ 2ರಂದು ಕೊರೊನಾ ದೃಢಪಟ್ಟಿತ್ತು. ಆರಂಭದಲ್ಲಿ ರೋಗ ಲಕ್ಷಣ ಇಲ್ಲದಿದ್ದರೂ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅಶೋಕ್ ಗಸ್ತಿ ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರಿಗೂ ಕೊರೋನಾ ಪಾಸಿಟಿವ್ ಆಗಿತ್ತು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm