ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm