ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm