ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am