ಬ್ರೇಕಿಂಗ್ ನ್ಯೂಸ್
08-02-22 02:45 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿಚಾರದ ಕಿಚ್ಚು ರಾಜ್ಯದಾದ್ಯಂತ ಆವರಿಸಿದೆ. ಕರಾವಳಿಯಿಂದ ಹತ್ತಿದ ಬೆಂಕಿ ಶಿವಮೊಗ್ಗ, ಬಾಗಲಕೋಟ, ಮಂಡ್ಯ, ವಿಜಯಪುರ ಹೀಗೆ ರಾಜ್ಯದ ಉದ್ದಗಲದಲ್ಲಿ ಹತ್ತಿಕೊಂಡಿದೆ. ಇದೇ ವೇಳೆ, ಹಿಜಾಬ್ ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು ತೀವ್ರ ತಿಕ್ಕಾಟಕ್ಕೆ ವೇದಿಕೆ ಸೃಷ್ಟಿಸಿದೆ.
ರಾಜ್ಯ ಸರಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ಕೋರ್ಟಿಗೆ ಹಾಜರಾಗಿದ್ದು ಹಿಜಾಬ್ ನಿಷೇಧ ವಿಚಾರದಲ್ಲಿ ವಾದ ಮಂಡಿಸಿದ್ದಾರೆ. ಕಾಲೇಜು ಎರಡು ತಿಂಗಳು ಇರುವಾಗ ಇಂತಹ ವಿವಾದ ಉಂಟಾಗ ಬಾರದಿತ್ತು. ಕಾಲೇಜು ಇನ್ನು ಎರಡು ತಿಂಗಳಿದ್ದು ಕೋರ್ಟ್ ಅಲ್ಲೀವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ವಿದ್ಯಾರ್ಥಿಗಳಿಗೆ ಔದಾರ್ಯ ತೋರಬೇಕು ಎಂದು ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಕೀರ್ ವಾದ ಮಂಡನೆ ಮಾಡಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಔದಾರ್ಯ ತೋರುವುದು ಸಂವಿಧಾನದಲ್ಲಿ ಇಲ್ಲ. ಸಂವಿಧಾನದಲ್ಲಿ ಇರುವುದನ್ನು ಮಾತ್ರ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಮುಂದುವರಿದು ವಾದ ಮಂಡಿಸಿದ ಮೊಹಮ್ಮದ್ ತಾಕಿರ್, ಖುರಾನಲ್ಲಿ ವ್ಯಕ್ತಿಯ ಖಾಸಗಿ ಅಂಗಗಳನ್ನು ಮುಚ್ಚಬೇಕು ಎಂದಿದೆ. ಅದರಂತೆ ಹಿಜಾಬ್, ಬುರ್ಖಾ ಧರಿಸಲಾಗುವುದು. ನಮಗೆ ಹಿಜಾಬ್ ಧರಿಸಲು ಸಂವಿಧಾನದ ಧಾರ್ಮಿಕ ಹಕ್ಕಿನ ಪ್ರಕಾರ ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ವಾದ ಆಲಿಸಿದ ನ್ಯಾಯಾಲಯ, ಖುರಾನ್ ಪ್ರತಿಯನ್ನು ಶಾಂತಿ ಪ್ರಕಾಶನದಿಂದ ಹೈಕೋರ್ಟಿಗೆ ತರಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರಕಾರದ ಹಿಜಾಬ್ ನಿಷೇಧಿಸುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಲು ಸೂಚನೆ ನೀಡಿದೆ. ಸರಕಾರದ ಪರವಾಗಿ ಅಟಾರ್ನಿ ಜನರಲ್ ಪ್ರಭುಲಿಂಗ ಹಾಜರಾಗಿದ್ದು ಮಧ್ಯಾಹ್ನ ನಂತರ ವಾದ ಮಂಡನೆ ಮಾಡಲಿದ್ದಾರೆ. ಕೋರ್ಟ್ ಎರಡೂ ಕಡೆಯ ವಾದ ಆಲಿಸಿದ ಬಳಿಕ ಸರಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡುತ್ತಾ ಅನ್ನುವ ಕುತೂಹಲ ಇದೆ.

ಇದಕ್ಕೂ ಮುನ್ನ ವಿಚಾರಣೆ ಆರಂಭಗೊಳ್ಳುವಾಗಲೇ ನ್ಯಾಯಾಧೀಶರು, ಹಿಜಾಬ್ ಬಗ್ಗೆ ವಿವಿಧ ಅರ್ಜಿಗಳು ಕೋರ್ಟಿಗೆ ಸಲ್ಲಿಕೆಯಾಗಿದ್ದು ಬೇರೆ ಬೇರೆಯಾಗಿ ವಿಚಾರಣೆ ನಡೆಸುವುದಿಲ್ಲ. ಒಂದು ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸುತ್ತಿದ್ದು ಅದೇ ತೀರ್ಪು ಎಲ್ಲದಕ್ಕೂ ಅನ್ವಯ ಆಗಲಿದೆ ಎಂದು ಹೇಳಿದರು. ಭಂಡಾರ್ಕರ್ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಹಲವು ಕಡೆಗಳಿಂದ ಹಿಜಾಬ್ ವಿಚಾರದಲ್ಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.
The Karnataka High Court has begun hearing the plea against a hijab ban in several junior colleges in parts of the state. Protests erupted in Mahatma Gandhi Memorial College in Udupi Tuesday as groups of students with saffron scarfs and those wearing hijabs clashed with each other.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm