ಬ್ರೇಕಿಂಗ್ ನ್ಯೂಸ್
09-02-22 03:18 pm HK Desk news ಕರ್ನಾಟಕ
ಮಂಡ್ಯ, ಫೆ.9 : ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಜೈಹೋ ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ ಜಮಾತ್ ಉಲೆಮಾ ಎ-ಹಿಂದ್ ಸಂಘಟನೆಯ ಪ್ರಮುಖನೊಬ್ಬ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾನೆ.
ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹುಡುಗರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು. ಈ ವೇಳೆ, ಬುರ್ಖಾಧಾರಿ ವಿದ್ಯಾರ್ಥಿನಿ ಬಂದಿದ್ದು ಜೈಶ್ರೀರಾಮ್ ಘೋಷಣೆಯಿಂದ ಸಿಟ್ಟಿಗೆದ್ದ ವಿದ್ಯಾರ್ಥಿನಿ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಕೂಗಿ ಪ್ರತಿಭಟಿಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗೆ ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಭಾರೀ ಪ್ರಚಾರ ಪಡೆದಿದ್ದು ಮುಸ್ಲಿಂ ಸಂಘಟನೆಗಳನ್ನು ಆಕರ್ಷಿಸಿದೆ. ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್ ಆಗಿದ್ದು ಜಮಾತ್ ಉಲೆಮಾ-ಎ-ಹಿಂದ್ ಪ್ರಮುಖನಾದ ಮೈಸೂರು ಮೂಲದ ಮಹಮೂದ್ ಮದನಿ ಎಂಬವರು ಜಾಲತಾಣದಲ್ಲಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ವಿಧ್ಯಾರ್ಥಿನಿ, ನಾನು ಎಂದಿನಂತೆ ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು ಈ ವೇಳೆ ವಿದ್ಯಾರ್ಥಿಗಳ ಗುಂಪು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗತೊಡಗಿದ್ದರು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಒಂದು ತುಂಡು ಬಟ್ಟೆ ವಿಚಾರಕ್ಕೆ ಅವರು ನಮ್ಮ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದ್ದಾರೆ. ನಮಗೆ ಶಿಕ್ಷಣವೇ ಮೊದಲ ಆದ್ಯತೆ. ಬುರ್ಖಾ ಮತ್ತು ಹಿಜಬ್ ಧರಿಸಿ ಕಾಲೇಜಿಗೆ ಬರುತ್ತಿದ್ದೆವು. ಆದ್ರೆ ಕಾಲೇಜಿನ ಒಳಗೆ ಬುರ್ಖಾ ತೆಗೆದು ಹಿಜಬ್ ಮಾತ್ರ ಉಳಿಸಿಕೊಳ್ಳುತ್ತಿದ್ದೆವು. ಇದು ಮುಂಚೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಆ ವಿದ್ಯಾರ್ಥಿನಿ ಹೇಳಿದ್ದಾರೆ.
Mandya Muslim Hijab Student rewarded Five Lakhs cash price by Jamaat for bravely tackling Hindu students at college. As the Karnataka hijab row continues to make headlines, a disturbing video of a solitary student in a burqa being heckled by a group of saffron shawl clad students has come to the fore. Videos of the incident, which happened in the state’s Mandya district, that were aired on regional TV channels start with the student arriving at PES College in her two-wheeler on the morning of February 8, Tuesday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm