ಬ್ರೇಕಿಂಗ್ ನ್ಯೂಸ್
15-02-22 11:24 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪೊಲೀಸರಿಗೆ ಮೇಲಿನ ಸಿಟ್ಟಿನಲ್ಲಿ ಟ್ರಾಫಿಕ್ ಸಿಗ್ನಲ್ ಕಂಬದ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ದಂಪತಿಯನ್ನು ಸಿಕಂದರ್ ಮತ್ತು ನಜ್ಮಾ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಬರೋಬ್ಬರಿ 20 ಲಕ್ಷ ಮೌಲ್ಯದ ಸುಮಾರು 230 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್ ಡೌನ್ ವೇಳೆ ತಮ್ಮ ಟೀ ಅಂಗಡಿಯಲ್ಲಿದ್ದ ವಸ್ತುಗಳನ್ನ ಪೊಲೀಸರು ದಾಳಿ ನೆಪದಲ್ಲಿ ನಾಶಪಡಿಸಿದ್ದರು ಎಂಬ ಸಿಟ್ಟಿನಲ್ಲಿ ಪೊಲೀಸರಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ದಂಪತಿ ನಗರದ ಸಿಗ್ನಲ್ ಗಳಲ್ಲಿನ ಬ್ಯಾಟರಿಗಳ ಕಳ್ಳತನಕ್ಕೆ ಇಳಿದಿದ್ದರು.
ಗಂಡ - ಹೆಂಡತಿ ಸೇರಿಕೊಂಡು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯೊಳಗೆ ಕಳ್ಳತನ ಮಾಡುತ್ತಿದ್ದರು. ತಮ್ಮ ಟಿವಿಎಸ್ ಎನ್ ಟಾರ್ಕ್ ಬೈಕ್ ನಲ್ಲಿ ಒಂದು ಕಟರ್ ಸಹಿತ ಸ್ಥಳಕ್ಕೆ ಬಂದು ಟ್ರಾಫಿಕ್ ಸಿಗ್ನಲ್ ಕಂಬದಲ್ಲಿ ವೈರ್ ಕಟ್ ಮಾಡಿ ಸುಲಭವಾಗಿ ಬ್ಯಾಟರಿ ಎತ್ತಿಕೊಂಡು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನ ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಎಎಸ್ಐ ದೇವರಾಜ್ ಮತ್ತು ಇನ್ಸ್ಪೆಕ್ಟರ್ ಮಲ್ಲೇಶ್ ಬೊಳೆತ್ತಿನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕದ್ದ 7 ಸಾವಿರ ಬೆಲೆಯ ಬ್ಯಾಟರಿಗಳನ್ನ ಕೇವಲ 1 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ಸುಳಿವು ಆಧರಿಸಿ ತನಿಖೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.
The police on Wednesday said that a couple have been arrested for stealing batteries from traffic signals. They added that 230 batteries stolen from 68 traffic junctions over the last few months have also been recovered. These batteries are used to run traffic signals.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm