ಬ್ರೇಕಿಂಗ್ ನ್ಯೂಸ್
17-02-22 08:22 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ಹಿಜಾಬ್ ವಿವಾದ ರಾಜ್ಯದಾದ್ಯಂತ ಕಿಚ್ಚು ಹಚ್ಚಿರುವಾಗಲೇ ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಅಲ್ಪಸಂಖ್ಯಾತರ ಶಾಲೆಗಳಲ್ಲೂ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳಿರುವುದನ್ನು ಧರಿಸದಂತೆ ಆದೇಶ ಹೊರಡಿಸಿದೆ.
ಈ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದ್ದು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸಬೇಕೆಂದು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಎಲ್ಲ ರೀತಿಯ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಗಳನ್ನು ಧರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟ, ಧಾರ್ಮಿಕ ಚಿಹ್ನೆಗಳನ್ನು ಕೂಡ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಮುಂದಿನ ಆದೇಶದ ವರೆಗೂ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತು ಧರಿಸಿ ಹೋಗುವಂತಿಲ್ಲ. ಸಮವಸ್ತ್ರ ಕಡ್ಡಾಯ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹೊರತಾಗಿಯೂ ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅವಾಂತರ ಸೃಷ್ಟಿಸಿದ್ದು ಹಲವೆಡೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ನಡೆಸಿದ್ದಾರೆ. ಇದರ ನಡುವೆಯೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. ಇಲಾಖೆಯ ವ್ಯಾಪ್ತಿಯಡಿ ಬರುವ ಹಲವು ಉರ್ದು ಶಾಲೆಗಳಲ್ಲಿ ಹಿಜಾಬ್ ನಿರಾಕರಿಸಿದ್ದಕ್ಕೆ ಭಾರೀ ವಿರೋಧ ಕೇಳಿಬಂದಿದ್ದು ವಿದ್ಯಾರ್ಥಿಗಳು ಮತ್ತು ಸಿಬಂದಿ ನಡುವೆ ಜಟಾಪಟಿ ನಡೆದಿದೆ.
The state's minority welfare hajj and wadf department has issued a circular forbidding students to wear any kind of shawl, scarp or hijab intheir schools.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm