ಬ್ರೇಕಿಂಗ್ ನ್ಯೂಸ್
17-02-22 09:53 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜ್ಯದಲ್ಲಿ ಹಿಜಾಬ್ ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರವೂ ಹಲವೆಡೆ ಹಿಜಾಬ್ ಪರವಾಗಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದು ವಿದ್ಯಾರ್ಥಿನಿಯರ ಜೊತೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಕೂಡ ಹೋರಾಟಕ್ಕೆ ಕೈಜೋಡಿಸಿದ್ದಾರೆ.
ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು. ಉಡುಪಿ ಎಂಜಿಎಂ ಕಾಲೇಜಿನಲ್ಲಿ ಇಂದು ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪ್ರಾಕ್ಟಿಕಲ್ ಪರೀಕ್ಷೆಯನ್ನು ಹಿಜಾಬ್ ವಿವಾದದ ಹಿನ್ನೆಲೆ ಮುಂದೂಡಲಾಗಿದೆ.

ಬೆಳಗಾವಿಯ ವಿಜಯಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಕೆಲವು ಮುಸ್ಲಿಂ ಯುವಕರು ಕಾಲೇಜು ಬಳಿ ಜಮಾಯಿಸಿ ಪ್ರಾಚಾರ್ಯರ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಅಲ್ಲದೆ, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಪೋಷಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಆರು ಮಂದಿ ಯುವಕರನ್ನ ವಶಕ್ಕೆ ಪಡೆದಿದ್ದಾರೆ. ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಈ ರೀತಿ ನಡೆದಿದ್ದು ಇದೇ ಮೊದಲು.
ವಿಜಯಪುರ ನಗರದಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಇವರಿಗೆ ಇತರ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.

ದಾವಣಗೆರೆಯ ಎವಿಕೆ ಮಹಿಳಾ ಕಾಲೇಜಿನ 42, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 4 ವಿದ್ಯಾರ್ಥಿನಿಯರು, ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 12, ಹರಿಹರದಲ್ಲಿ 7 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿ ತರಗತಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಹೈಕೋರ್ಟ್ ಆದೇಶ ಧಿಕ್ಕರಿಸಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದರಿಂದ ಗೊಂದಲ ವಾತಾವರಣ ಉಂಟಾಗಿ ಪೊಲೀಸರು ಹಾಗೂ ಪಾಲಕರು, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಸರಳಾ ದೇವಿ ಕಾಲೇಜಿನಲ್ಲಿ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದರು.
ಯಾದಗಿರಿ : ಸರ್ಕಾರಿ ಉರ್ದು ಶಾಲೆಯ ಮುಸ್ಲಿಂ ಮಕ್ಕಳು ತರಗತಿ ಬಹಿಷ್ಕರಿಸಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ವಪ್ನ ಮೈದಾನದಲ್ಲಿರುವ ಪಿಯು ಕಾಲೇಜು ವಿದ್ಯಾರ್ಥಿಗಳೂ ತರಗತಿ ಬಹಿಷ್ಕಾರ ಮಾಡಿದರು. ಪ್ರತಿಭಟನೆಗೆ ಮುಂದಾಗಿದ್ದ ವಿದ್ಯಾರ್ಥಿನಿಯರ ಗುಂಪನ್ನು ಪೊಲೀಸರು ಚದುರಿಸಿದರು.
The tense situation continued in and around Karnataka colleges as the pre-university students wearing hijab demanded to be let inside classrooms. The hijab-clad students were sent back, and many protested the decision of college authorities. Some of them, who came in support of the hijab-wearing students near the Vijay Para-Medical College, were taken into custody in Belagavi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm