ಬ್ರೇಕಿಂಗ್ ನ್ಯೂಸ್
19-02-22 11:55 am HK Desk news ಕರ್ನಾಟಕ
ಕಲಬುರ್ಗಿ, ಫೆ.19 : ಕೆಲವು ಕಾಲೇಜುಗಳಲ್ಲಿ ಹಿಜಾಬ್ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಲಾಗ್ತಿದೆ. ಗೊಂದಲ ಸೃಷ್ಟಿಸುವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅತಿರೇಕಕ್ಕೆ ಹೋದರೇ ಕೈಕಟ್ಟಿ ಕೂಡಲು ಆಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಾಲೆ, ಕಾಲೇಜು ಮುಂದೆ ಗಲಾಟೆ ಮಾಡಿಕೊಂಡಿದ್ದರೆ ಅದನ್ನು ಕಣ್ಣಿನಿಂದ ನೋಡಿಕೊಂಡು ಸುಮ್ಮನಿರಲು ಸಾಧ್ಯ ಇಲ್ಲ. ಇದರ ಹಿಂದೆ ಮತಾಂಧ ಶಕ್ತಿಗಳು ಕಾರ್ಯ ನಿರ್ವಹಿಸುತ್ತಿವೆ. ಮತಾಂಧರ ಶಕ್ತಿಗಳು ಮಕ್ಕಳಲ್ಲಿ ವಿಷಬೀಜ ಬಿತ್ತುತ್ತಿವೆ. ವಿವಾದ ಸೃಷ್ಟಿಸುವ ಸಂಘಟನೆಗಳನ್ನ ನಿರ್ಜೀವ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತ ಶಾಸಕರ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವು ಶಾಸಕರು ಭೇಟಿಯಾಗಿ ಮನವಿ ಪತ್ರ ಕೊಟ್ಟಿದ್ದಾರೆ. ಆದರೆ ಸಮಾಜದಿಂದ ಈಗಿರುವ ಸ್ಥಿತಿಯನ್ನ ಹೊರತರಬೇಕಾಗಿದೆ. ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಸಮವಸ್ತ್ರ ಅಂದರೆ ಅದು ಸಮಾನತೆ, ಸಂಸ್ಕಾರ ತುಂಬುವ ಕೆಲಸ ಆಗಬೇಕು. ಮತ್ತೊಮ್ಮೆ ನಮ್ಮ ಧರ್ಮ, ಜಾತಿ ಒಂದೇ ಅಂತಾ ತೋರಿಸಬೇಕು. ಕೋರ್ಟ್ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದರು.

ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಹೋರಾಟ ವಿಚಾರದ ಬಗ್ಗೆ ಹೇಳಿದ ಅವರು, ಈಶ್ವರಪ್ಪ ಯಾವ ಶಬ್ದ ಹೇಳಿದಾರೆ ಅನ್ನೊದು ಪೂರ್ತಿ ಪ್ರಸಾರ ಮಾಡಬೇಕು. ಈಶ್ವರಪ್ಪ ಹೇಳಿದ್ರಲ್ಲಿ ತಪ್ಪು ಇಲ್ಲ, ತಪ್ಪಾಗಿ ಅಥೈಸಿಕೊಳ್ಳಲಾಗ್ತಿದೆ. ರಾಷ್ಟ್ರ ಧ್ವಜ ಇಳಿಸಿ ಎಬಿವಿಪಿ ಧ್ವಜ ಏರಿಸಲಾಗಿದೆ ಅಂತಾ ಹೇಳಿರುವುದು ಸುಳ್ಳು. ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಈಶ್ವರಪ್ಪ ಹೇಳಿಲ್ಲ. ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ, ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಸಂದರ್ಭ ಬರಬಹುದು ಅಂದಿದ್ದಾರೆ ಅಷ್ಟೆ. ಮುಳುಗೋನಿಗೆ ಹುಲ್ಲು ಕಡ್ಡಿ ಆಧಾರ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋದನ್ನ ಬಿಟ್ಟು ಕಾಂಗ್ರೆಸ್ ಕಾಲಹರಣ ಮಾಡ್ತಿದೆ. ಒಂದು ಸುಳ್ಳನ್ನ ನೂರು ಬಾರಿ ಹೇಳಿದ್ರು ಅದು ಸತ್ಯವಾಗಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
Behind Hijab row there are lot of communal organisations states Karnataka Home Minister.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm