ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.

ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm