ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.

ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm