ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.

ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm