ಬ್ರೇಕಿಂಗ್ ನ್ಯೂಸ್
20-02-22 10:16 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಫೆ. 20 : ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಪ್ರವಾಸ ತೆರಳಿ ಅಪಾಯದಲ್ಲಿ ಸಿಲುಕಿದ್ದ ಬೆಂಗಳೂರಿನ ವಿದ್ಯಾರ್ಥಿಯನ್ನು ಹೆಲಿಕಾಪ್ಟರ್ ಮೂಲಕ ವಾಯುಪಡೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಹಿಮಾಚಲ ಪ್ರದೇಶ ಮೂಲದ 19 ವರ್ಷದ ನಿಶಾಂತ್ ಗುಲ್ ಎಂಬ ವಿದ್ಯಾರ್ಥಿ ಇತರ ಹುಡುಗರ ಜೊತೆ ವೀಕೆಂಡ್ ಪ್ರವಾಸಕ್ಕೆ ಬಂದಿದ್ದ ವೇಳೆ ನಂದಿಬೆಟ್ಟದ ಕಡಿದಾದ ಬಂಡೆಯ ಎಡೆಯಲ್ಲಿ ಸಿಲುಕಿದ್ದರು. ಅವರನ್ನು ಏರ್ ಫೋರ್ಸ್ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.

ಬೆಟ್ಟದಿಂದ ಅಪಾಯಕಾರಿ ಜಾಗಕ್ಕೆ ಬಿದ್ದ ಹಿನ್ನೆಲೆ ನಿಶಾಂತ್ ಬೆನ್ನಿಗೆ ಗಂಭೀರ ಗಾಯವಾಗಿದೆ. ಹಾಗಾಗಿ ಹೆಲಿಕಾಪ್ಟರ್ ಮೂಲಕ ಮೇಲಕ್ಕೆತ್ತಿ ಅದರಲ್ಲಿಯೇ ಯಲಹಂಕ ಏರ್ ಬೇಸ್ಗೆ ರವಾನೆ ಮಾಡಲಾಗಿದೆ. ಅಲ್ಲಿಂದ ಆಸ್ಟರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗಿದೆ.


ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ವೀಕೆಂಡ್ ಎಂದು ಸ್ನೇಹಿತರ ಜೊತೆ ನಂದಿಬೆಟ್ಟಕ್ಕೆ ಬಂದಿದ್ದ. ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದು ಈ ವೇಳೆ ನಿಶಾಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನೇ ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ. ಇಂದು ಬೆಳಗ್ಗಿನಿಂದ ಸಂಜೆಯ ವರೆಗೂ ಅನ್ನ , ನೀರಿಲ್ಲದೆ ಬಿಸಿಲಿನ ಮಧ್ಯೆ ಪರದಾಡಿದ್ದು ಆಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ.

ಅವರಿಗೆ ಯುವಕ ದುರ್ಗಮ ಹಾದಿಯಲ್ಲಿ ಪತ್ತೆಯಾಗಿದ್ದು ವಾಯುಪಡೆ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ಯುವಕನ ರಕ್ಷಣೆ ಮಾಡಲಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
A 19-year-old student, who fell 300 ft from a steep cliff onto a rocky ledge at Nandi Hills was rescued with the help of an Indian Air Force helicopter on Sunday. The rescue operation was conducted jointly by the Chickballapur police and the Indian Air Force. Though he was trapped and unable to move, the young man had the presence of mind to contact the police and his family in Delhi informing them about his predicament.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm