ಬ್ರೇಕಿಂಗ್ ನ್ಯೂಸ್
22-02-22 11:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.23 : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೂ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಸುಪಾರಿ ಕೊಟ್ಟವರ ನಡುವೆ ಏನೋ ಸಂಬಂಧ ಇದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂಶಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪಾರಿ ಕೊಟ್ಟವರಿಗೆ ಹಾಗೂ ಈಶ್ವರಪ್ಪಗೂ ಏನೋ ಸಂಬಂಧ ಇದೆ. ಮೊದಲು ಅದರ ಬಗ್ಗೆ ತನಿಖೆ ಮಾಡಲಿ. ಈಶ್ವರಪ್ಪನವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಿ, ಸತ್ಯ ಹೊರಗಡೆ ಬರುತ್ತೆ. ಸಂಘ ಪರಿವಾರದವರು ಈವರೆಗೆ 36 ಕೊಲೆ ಮಾಡಿದ್ದಾರೆ. 13 ಜನ ಹಿಂದೂ ಯುವಕರ ಕೊಲೆಯಲ್ಲಿ ಸಂಘ ಪರಿವಾರದ ಪಾತ್ರ ಇದೆ ಎಂದು ಆರೋಪ ಮಾಡಿದರು.
ಶಿವಮೊಗ್ಗ ಯುವಕನ ಕೊಲೆ ಪ್ರಕರಣದ ನಂತರ ಆದ ಬೆಳವಣಿಗೆಗಳು ನಿಜಕ್ಕೂ ಖಂಡನೀಯ. ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೊಸದೇನಲ್ಲ. ಮಾಧ್ಯಮದ ವರದಿಯ ಪ್ರಕಾರ ಈ ಹತ್ಯೆಯಾದ ವ್ಯಕ್ತಿ ರೌಡಿಶೀಟರ್ ಅಂತ ಗೊತ್ತಾಗಿದೆ. ಆದರೆ ಸರ್ಕಾರದ ಜವಾಬ್ದಾರಿಯುತವಾದ ಸ್ಥಾನದಲ್ಲಿರುವವರ ಮಾತುಗಳು ಖಂಡನೀಯ. ಕೊಲೆ ನಡೆದ ತಕ್ಷಣ ಪೊಲೀಸರ ತನಿಖೆ ಆರಂಭವಾಗುವ ಮುನ್ನ ಸಚಿವ ಈಶ್ವರಪ್ಪ, ರಾಘವೇಂದ್ರ, ಪ್ರತಾಪ್ ಸಿಂಹ ಮುಸ್ಲಿಮರ ತಲೆಗೆ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇವರ ಪ್ರಚೋದನಕಾರಿ ಹೇಳಿಕೆಯಿಂದ ಮುಸ್ಲಿಂ ಮನೆಯ ಮೇಲೆ, ಅಂಗಡಿಯ ಮೇಲೆ, ವಾಹನದ ಮೇಲೆ ಬೆಂಕಿ ಹಚ್ಚಲಾಗಿದೆ. 143 ಸೆಕ್ಷನ್ ಇದ್ರೂ ಮೆರವಣಿಗೆ ಮಾಡಿದ್ರು. ಪೊಲೀಸರ ಕಣ್ಣಮುಂದೆಯೇ ಈಶ್ವರಪ್ಪ ಕಡೆಯ ಐನೂರು ಜನ ಹುಡುಗರು ದಾಂಧಲೆ ಮಾಡ್ತಾರೆ. ಕಫ್ರ್ಯೂ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿರೋದು ಈಶ್ವರಪ್ಪ, ಈಶ್ವರಪ್ಪ – ಎ1, ರಾಘವೇಂದ್ರ, ಗೃಹಸಚಿವರು ಇವರೆಲ್ಲ ನೇರ ಹೊಣೆ. ಎರಡು ದಿನದ ಮುಂಚೆ ಶಿವಮೊಗ್ಗದಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗಿತ್ತು ಎಂದರು.
ಹಿಜಾಬ್ಗೂ ಕೊಲೆಗೂ ನೇರ ಲಿಂಕ್ ಬಗ್ಗೆ ನಾನೇನು ಪ್ರತಿಕ್ರಿಯೆ ಕೊಡಲಾರೆ. ತನಿಖೆ ನಡೆಯುತ್ತಿದೆ, ನೈಜ್ಯ ಕಾರಣ ಬರಲಿ. ನಾಯಕರ ಒತ್ತಡಕ್ಕೆ ಮಣಿದು ಅಮಾಯಕರನ್ನು ಬಂಧಿಸೋದು ಅಲ್ಲ. ಹಿಜಬ್ ವಿಚಾರದಲ್ಲಿ ಸರ್ಕಾರ ವೈಫಲ್ಯವಾಗಿದೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳೋಕೆ ಈ ರೀತಿಯ ಕೆಲಸ ಮಾಡಿರಬಹುದು ಎಂದು ಕಿಡಿಕಾರಿದರು.
SDPI President Abdul Majeed Garam has said that he has something to do with minister KS Eshwarappa and Supari in connection with the murder of a Hindu activist in Shimoga.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm