ಬ್ರೇಕಿಂಗ್ ನ್ಯೂಸ್
23-02-22 10:52 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.23 : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದಲ್ಲಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದರೆ, ಕಳೆದ ಮೂರು ವರ್ಷಗಳಲ್ಲಿ ಕೋಮು ವೈಷಮ್ಯದ ಪ್ರಕರಣಗಳ ಸ್ಥಿತಿಗತಿ ಹೇಗಿದೆ ಎನ್ನುವ ಬಗ್ಗೆ ಕಾರ್ಯಕರ್ತರು ನಾಚಿಕೊಳ್ಳುವ ರೀತಿ ರಾಜ್ಯದ ಗೃಹ ಸಚಿವರು ವರದಿ ನೀಡಿದ್ದಾರೆ. 2019ರಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 63 ಕೋಮು ಗಲಭೆ ಪ್ರಕರಣಗಳು ನಡೆದಿದ್ದು, ಒಂದು ಪ್ರಕರಣದಲ್ಲಿಯೂ ಅಪರಾಧ ಸಾಬೀತು ಮಾಡಲಾಗಿಲ್ಲ. ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗೆ ಸಚಿವರು ಈ ಮಾಹಿತಿ ನೀಡಿದ್ದಾರೆ. ಸರಕಾರದ ಅಂಕಿ ಅಂಶಗಳ ಪ್ರಕಾರ, ಈ ಪೈಕಿ ಹೆಚ್ಚಿನ ಪ್ರಕರಣಗಳಲ್ಲಿ ಇನ್ನೂ ತನಿಖೆ ನಡೆಯುತ್ತಿದೆ. ಉಳಿದವು ಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿದೆ. 63 ಪ್ರಕರಣಗಳಲ್ಲಿ ಯಾವುದರಲ್ಲೂ ಅಪರಾಧ ಸಾಬೀತು ಆಗಿಲ್ಲ. ಶಿವಮೊಗ್ಗದಲ್ಲಿ ಹರ್ಷ ಎಂಬ ಬಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಸಚಿವರು, ಬಿಜೆಪಿ ನಾಯಕರು ಅಬ್ಬರದ ಮಾತುಗಳನ್ನು ಆಡುತ್ತಿರುವಾಗಲೇ ಈ ರೀತಿಯ ವಿಭಿನ್ನ ಮಾಹಿತಿ ಬಿಜೆಪಿ ಸರಕಾರದಿಂದಲೇ ಅಧಿಕೃತವಾಗಿ ನೀಡಿದ್ದು ಸರಕಾರಕ್ಕೆ ಮುಜುಗರ ಸೃಷ್ಟಿಸುವಂತಾಗಿದೆ.


2019ರಲ್ಲಿ 12 ಪ್ರಕರಣಗಳು, 2020ರಲ್ಲಿ 21, 2021ರಲ್ಲಿ 23 ಪ್ರಕರಣಗಳು ವರದಿಯಾಗಿದ್ದವು. ಕಳೆದ ಎರಡು ತಿಂಗಳಲ್ಲಿ ಏಳು ಪ್ರಕರಣಗಳು ನಡೆದಿವೆ. ಮೂರು ವರ್ಷಗಳಲ್ಲಿ ಕೋಮು ಸಂಬಂಧೀ ಅತಿ ಹೆಚ್ಚು ಪ್ರಕರಣ ನಡೆದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ. 12 ಕೇಸುಗಳು ಒಂದೇ ಜಿಲ್ಲೆಯಲ್ಲಿ ವರದಿಯಾಗಿವೆ. ಈ ಬಗ್ಗೆ ಹಿರಿಯ ವಕೀಲ ಬಿ.ಟಿ.ವೆಂಕಟೇಶ್ ವಿಭಿನ್ನ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಕರಣ ಸಾಬೀತು ಪಡಿಸಲು ಸಾಕ್ಷಿ ಮುಖ್ಯವಾಗುತ್ತದೆ. ಆದರೆ ಈ ರೀತಿಯ ಪ್ರಕರಣಗಳಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಇರುವುದರಿಂದ ಸಾಕ್ಷಿಗಳನ್ನು ಬೆದರಿಸಿ, ಆಮಿಷ ಒಡ್ಡುವ ಮೂಲಕ ಕೋರ್ಟಿಗೆ ಹಾಜರಾಗದಂತೆ ಮಾಡುತ್ತಾರೆ. ಇದು ಬಲ ಮತ್ತು ಎಡ ಪಂಥದ ಎರಡೂ ಪ್ರಕರಣಗಳಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಕೆಲಸವಾಗುತ್ತದೆ. ಸಾಕ್ಷಿ ಇಲ್ಲದಿದ್ದರೆ ಕೋರ್ಟಿನಲ್ಲಿ ಕೇಸು ನಿಲ್ಲುವುದಿಲ್ಲ ಎಂದು ಹೇಳುತ್ತಾರೆ.
Karnataka has witnessed 63 instances of communal violence since 2019 with no conviction yet in a single case, Home Minister Araga Jnanendra told the Legislative Assembly in a written reply. This was a reply to a question by Chittapur Congress MLA Priyank Kharge.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm