ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm