ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm