ಬ್ರೇಕಿಂಗ್ ನ್ಯೂಸ್
26-02-22 11:47 am HK Desk news ಕರ್ನಾಟಕ
ಬಾಗಲಕೋಟ, ಫೆ.26 : ಉಕ್ರೇನ್ ಮೇಲೆ ನಿರಂತರವಾಗಿ ರಷ್ಯಾ ಪಡೆಗಳು ಬಾಂಬ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಉಕ್ರೇನಿನ ಪೂರ್ವ ಭಾಗದ ಖಾರ್ಕೀವ್ ನಗರದಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಅಪೂರ್ವಾ ತನ್ನ ಹೆತ್ತವರಿಗೆ ವಾಟ್ಸಾಪ್ ಸಂದೇಶ ಮಾಡಿದ್ದು ಭಯ, ಆತಂಕ ತೋಡಿಕೊಂಡಿದ್ದಾರೆ.
ತಂದೆ ಸಿದ್ದಲಿಂಗೇಶ್ ಅವರಿಗೆ ಶುಕ್ರವಾರ ರಾತ್ರಿ ವಾಟ್ಸಾಪ್ ಸಂದೇಶ ಕಳಿಸಿರುವ ಅಪೂರ್ವಾ ಕದಂಪುರ, ನಮ್ಮನ್ನು ಭಾರತ ಸರಕಾರ ರಕ್ಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಭಾರತೀಯ ಸಮಯ 10.56 ರಾತ್ರಿ. ನಾವು ಇರುವ ಕಾರ್ಕೇವ್ ನಗರದಲ್ಲಿ ನಮ್ಮ ಕಟ್ಟಡದ ಹತ್ತಿರವೇ ಬಾಂಬ್ ಹಾಕುತ್ತಿದ್ದಾರೆ. ನಾವು ಅಪಾಯದಲ್ಲಿ ಇದ್ದೇವೆ ,ನಮ್ಮ ಫೋನ್ಗಳನ್ನು ಫ್ಲೈಟ್ ಮೋಡಿನಲ್ಲಿ ಇಡಲು ಹೇಳಿದ್ದಾರೆ. ಫೋನ್ ಸಂಪರ್ಕ ಆಗದಿದ್ದರೆ ಭಯ ಪಡಬೇಡಿ. ಆದರೆ ನಮ್ಮ ಭಾರತ ಸರ್ಕಾರಕ್ಕೆ ನಮ್ಮ ಮನವಿ ಏನೆಂದರೆ, ನಾವು ಹೆಚ್ಚು ವಿದ್ಯಾರ್ಥಿಗಳು ಇರುವುದು ಉಕ್ರೇನಿನ ಪೂರ್ವ ಭಾಗ ಕಾರ್ಕೇವ್ ನಗರದಲ್ಲಿ. ನಮ್ಮನ್ನು ಪೋಲಾಂಡ್ ಮುಖಾಂತರ ಕೊಂಡೊಯ್ಯಲು ಯತ್ನಿಸುವುದು ತುಂಬಾ ಕಷ್ಟ. ಅಲ್ಲಿಂದ ಹೋದರೆ ಸುಮಾರು 1000- 1500 ಕಿಲೋಮೀಟರ್ ದೂರ ಆಗುತ್ತದೆ.

ಅದರ ಬದಲು ನಮ್ಮನ್ನು ರೊಮೇನಿಯಾ ಮುಖಾಂತರವೇ ಸ್ಥಳಾಂತರ ಮಾಡಿದ್ರೆ ಸರಿ ಅನ್ಸುತ್ತೆ. ದಯವಿಟ್ಟು ನಮ್ಮ ಸರ್ಕಾರಕ್ಕೆ ನಮ್ಮ ಅಭಿಪ್ರಾಯ ತಲುಪಿಸಿ. ಇಲ್ಲಿ ನಾವು 8000 ಜನ ವಿದ್ಯಾರ್ಥಿಗಳಿದ್ದೇವೆ. ಯಾವುದೇ ಸಾರಿಗೆ ವ್ಯವಸ್ಥೆ ಸರಿ ಇಲ್ಲ.. ದಯವಿಟ್ಟು ನಮ್ಮ ಮನವಿಯನ್ನು ಭಾರತೀಯ ರಾಯಭಾರಿ ಕಚೇರಿಗೂ ತಲುಪಿಸಿ ಎಂದು ಅಪೂರ್ವ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಭಾರತ ಸರಕಾರಕ್ಕೆ ತಮ್ಮ ಮನವಿ ತಲುಪಿಸುವಂತೆ ಕೋರಿದ್ದಾರೆ. ಅಪೂರ್ವಾ ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿದ್ದು ಎಂಬಿಬಿ ಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ. ಇದೇ ರೀತಿ ಬನಹಟ್ಟಿ ಮೂಲದ ಕಿರಣ ಸವದಿ ಕೂಡ ಮನವಿ ಮಾಡಿದ್ದಾರೆ. ಕಿರಣ ಸವದಿ ಕೂಡ ಅದೇ ಕಾರ್ಕೀವ್ ನಗರದಲ್ಲಿದ್ದಾರೆ.
Bagalkot girl cries for help from Ukraine pleads indian govt to save her
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm