ಬ್ರೇಕಿಂಗ್ ನ್ಯೂಸ್
02-03-22 10:55 pm HK Desk news ಕರ್ನಾಟಕ
ಹಾವೇರಿ, ಮಾ.2: ನಮ್ಮ ಕರ್ನಾಟಕದಲ್ಲಿ ಮೆಡಿಕಲ್ ಇಂಜಿನಿಯರಿಂಗ್ ಕಾಲೇಜು ಹೆಸರಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಮೆಡಿಕಲ್ ಕಾಲೇಜು ತೆಗೆದಿಲ್ಲ, ಲೂಟಿ ಮಾಡಲು ತೆಗೆದಿದ್ದಾರೆ. ಇಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡಲು ಸೌಲತ್ತು ಇಲ್ಲ. ಇದ್ದರೂ ಕೋಟಿಗಟ್ಟಲೆ ಹಣ ಬೇಕು. ಮೆಡಿಕಲ್ ಕಾಲೇಜು ನಡೆಸುತ್ತಿರುವವರೇ ಇಂದು ನವೀನ್ ಜೀವ ತೆಗೆದಿದ್ದಾರೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹರಿಹಾಯ್ದಿದ್ದಾರೆ.
ಯುಕ್ರೇನಲ್ಲಿ ರಷ್ಯಾ ಬಾಂಬ್ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮೆಡಿಕಲ್ ವಿದ್ಯಾರ್ಥಿ ನವೀನ್ ಮನೆಗೆ ಭೇಟಿಯಿತ್ತು ಮನೆಯವರಿಗೆ ಸಾಂತ್ವನ ಹೇಳಿ ಸರಕಾರ, ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೀನ್ ಸ್ವರ್ಗಸ್ಥನಾಗಿದ್ದಾನೆ, ಈ ಘಟನೆ ನಡೆಯಬಾರದಾಗಿತ್ತು. ಯಾರದೋ ದೇಶದ ಯುದ್ದದಲ್ಲಿ ನಮ್ಮವರು ಬಲಿಯಾಗುವಂತದ್ದು ದುರಂತ. ತಮ್ಮ ದೇಶಕ್ಕೆ ಬಂದವರನ್ನು ಕಾಪಾಡುವುದು ಅವರ ಕರ್ತವ್ಯ. ಬೇರೆ ದೇಶಕ್ಕೆ ಹೋದವರನ್ನು ಕರೆ ತರುವುದು ನಮ್ಮ ಕರ್ತವ್ಯ. ರಾಜ್ಯದ ಕೇಂದ್ರ ಮಂತ್ರಿಗಳು ಮತ್ತು ಇದೇ ಜಿಲ್ಲೆಯ ಸಿಎಂಗೆ ಈ ಬಗ್ಗೆ ಆಗ್ರಹ ಮಾಡುತ್ತೇನೆ. ಉಕ್ರೇನಲ್ಲಿರುವ ಮಕ್ಕಳನ್ನು ಜೊತೆಗೆ ಅಲ್ಲಿರುವ ಜನರನ್ನು ಕರೆತರವುದು ವೇಗವಾಗಿ ಆಗಬೇಕು. ಇದಕ್ಕಾಗಿ ಏನು ಮಾಡಬೇಕೋ ಅದನ್ನು ಮಾಡಿ ಎಂದು ಆಗ್ರಹಿಸಿದರು.
ಎಂಬಿಬಿಎಸ್ ಕಲಿತ ರ್ಯಾಂಕ್ ಸ್ಟೂಡೆಂಟನ್ನು ಕಳೆದುಕೊಂಡಿದ್ದು ನಮ್ಮ ಸಮಾಜದ ದುರಂತ. ಇನ್ನು ಒಂದೇ ವರ್ಷದಲ್ಲಿ ವೈದ್ಯನಾಗಬೇಕಾದವನು ಇಲ್ಲ ಎಂದರೆ ಕುಟುಂಬಕ್ಕೆ ನೋವು ಆಗುತ್ತೆ. ಆದರೆ ನವೀನ್ ಮೃತದೇಹವನ್ನಾದ್ರು ಕೇಂದ್ರ ಸರಕಾರ ತಂದು ಕೊಡಬೇಕು. ಅವರ ಸಹೋದರ ಹರ್ಷನಿಗೆ ಸರ್ಕಾರಿ ನೌಕರಿ ಕೋಡಬೇಕು. ಇಲ್ಲವಾದಲ್ಲಿ ಶ್ರೀರಾಮ್ ಸೇನೆ ಉಗ್ರ ಹೋರಾಟಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಸಿದರು.
Pramod Muthalik slams medical college, says college responsible for the death of Naveen in Ukraine
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm