ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm