ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm