ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am