ಬ್ರೇಕಿಂಗ್ ನ್ಯೂಸ್
05-03-22 09:07 pm HK Desk news ಕರ್ನಾಟಕ
ಹಾವೇರಿ, ಮಾ 05: ಉಕ್ರೇನ್ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.
ಇಂದು ನವೀನ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ದಾಳಿಗೆ ಉಕ್ರೇನ್ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಉಕ್ರೇನ್ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಣೆ:
ಉಕ್ರೇನ್ನಲ್ಲಿ ರಷ್ಯಾದ ಬಾಂಬ್ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.
Chief Minister Basavaraj Bommai meets the family of Naveen SG, the Karnataka medical student who was killed in Ukraine recently. The Chief Minister handed over a cheque of Rs 25 lakh to the bereaved family members of the victim.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm