ಬ್ರೇಕಿಂಗ್ ನ್ಯೂಸ್
12-03-22 10:49 am HK Desk news ಕರ್ನಾಟಕ
ತಮಕೂರು, ಮಾ.12: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ನಿರಾಸೆಯೂ ಆಗಿದೆ. ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆ ಆಗುತ್ತಿದೆ ಎಂಬ ವಾತಾವರಣ ಇದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ. ಇಂಥ ಸಂದರ್ಭದಲ್ಲೂ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದರೆ ಏನೋ ಕಾರಣ ಇರಬಹುದು. ಅಥವಾ ಕಾಂಗ್ರೆಸ್ ಚುನಾವಣೆ ಮಾಡುವ ರೀತಿಯೇ ಸರಿ ಇಲ್ಲವೋ ಏನೋ ಗೊತ್ತಾಗುತ್ತಿಲ್ಲ. ಸೋಲಿಗೆ ನಾವು ಕಾರಣ ಹುಡುಕಬೇಕಾಗಿದೆ.
ಹೀಗೆಂದು ಪ್ರತಿಕ್ರಿಯಿಸಿದ್ದಾರೆ, ಮಾಜಿ ಸಚಿವ ಪರಮೇಶ್ವರ್. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ಬಿಜೆಪಿ, ಎಸ್ ಪಿಗಿಂತ ಹೆಚ್ಚು ರ್ಯಾಲಿ ಮಾಡಿದ್ರು. ಜನರನ್ನು ತಲುಪುವ ಪ್ರಯತ್ನ ಮಾಡಿದ್ರು. ಆದರೂ ಮತ ಬೇರೆಯವರಿಗೆ ಹೋಗಿದೆ. ಇದನ್ನು ನಾವು ಆಂತರಿಕವಾಗಿ ವಿಶ್ಲೇಷಣೆ ಮಾಡಬೇಕು.
2024 ರ ಲೋಕಸಭಾ ಚುನಾವಣೆ ಟರ್ನಿಂಗ್ ಪಾಯಿಂಟ್. ಈ ದೇಶದ ಅಭಿವೃದ್ಧಿ, ಬೆಳವಣಿಗೆ ಕಾರಣದಿಂದ 2024ರ ಚುನಾವಣೆ ಬಹಳ ಮುಖ್ಯ.. ಅಷ್ಟರ ಒಳಗೆ ನಾವು ನಮ್ಮ ಮನೆಯನ್ನು ಸರಿಪಡಿಸಿಕೊಳ್ಳಬೇಕು. ನಮ್ಮ ತಪ್ಪಗಳನ್ನು ತಿದ್ದಿಕೊಳ್ಳಬೇಕು. ಸ್ಥಳೀಯವಾಗಿ ಲೀಡರ್ ಶಿಪ್ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಇವಿಎಂ ಬಗ್ಗೆ ನನಗೆ ಅನುಮಾನ ಈಗಲೂ ಇದೆ. ಇವಿಎಂ ಅನ್ನು ಮ್ಯಾನುಪ್ಲೆಟ್ ಮಾಡುವ ಟೆಕ್ನಾಲಜಿ ಅವರು ಇಟ್ಟಕೊಂಡಿದ್ದಾರೆ. ಬೇರೆ ಬೇರೆ ದೇಶದಿಂದ ಅದನ್ನು ಆಪರೇಟ್ ಮಾಡುತ್ತಾರೆ ಎಂದು ಕೇಳಿದ್ದೇವೆ. ನನಗೂ ಕೂಡ ಅನೇಕ ಬಾರಿ ಆ ರೀತಿ ಅನಿಸಿದೆ. ತಂತ್ರಜ್ಞರು ಹೇಳಿಕೆ ನೋಡಿದರೆ ಇವಿಎಂ ಹ್ಯಾಕ್ ಆಗಿರಬಹುದು ಅನಿಸುತ್ತದೆ. ಆದರೆ ನಾವು ಅದನ್ನು ಕೇವಲ ಆರೋಪ ಅಷ್ಟೇ ಮಾಡಬಹುದು,
ಸ್ಪಷ್ಟವಾಗಿ ನಮಗೂ ಗೊತ್ತಿಲ್ಲ. ಉತ್ತರ ಪ್ರದೇಶದಲ್ಲೂ ಹ್ಯಾಕ್ ಆಗಿರಬಹುದು. ಯಾಕೆ ಆಗಬಾರದು, ಉತ್ತರ ಪ್ರದೇಶ 80 ಲೋಕಸಭಾ ಸದಸ್ಯರಿರುವ ರಾಜ್ಯ. ಹಾಗಾಗಿ ಆ ರಾಜ್ಯದಲ್ಲಿ ಆಡಳಿತಕ್ಕೆ ಬಂದರೆ ಸಂಸತ್ ಚುನಾವಣೆ ಸುಲಭವಾಗುತ್ತದೆ ಎನ್ನುತ್ತಾರೆ. ಹಾಗಾಗಿ ಅಲ್ಲಿ ಕೂಡ ಯಾಕೆ ಹ್ಯಾಕ್ ಮಾಡಿರಬಾರದು ಎಂಬ ಪ್ರಶ್ನೆನೂ ಬರುತ್ತದೆ. ಹೀಗಾಗಿ ಚುನಾವಣೆಗೆ ಬ್ಯಾಲೇಟ್ ಪೇಪರ್ ಮತ್ತೆ ತರಬೇಕು ಎಂದು ಒತ್ತಾಯ ಮಾಡುತ್ತೇನೆ..
ಡಿಕೆ ಶಿವಕುಮಾರ್ ಗೆ ಫ್ರೀ ಹ್ಯಾಂಡ್ ಸಿಕ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಡಿ.ಕೆ ಶಿವಕುಮಾರ್ ಸ್ವತಂತ್ರವಾಗಿದ್ದಾರೆ. ಅವರಿಗೆ ಯಾವುದೇ ಕಂಟ್ರೋಲ್ ಇಲ್ಲ,ಅವರು ಒಳ್ಳೆ ಕೆಲಸ ಮಾಡುತಿದ್ದಾರೆ. ಪ್ರಮುಖ ನಿರ್ಧಾರವನ್ನು ಎಲ್ಲರ ಜೊತೆ ಚರ್ಚೆ ಮಾಡಿ ಮಾಡುತ್ತಾರೆ.. ಮೇಕೆದಾಟು ಪಾದಯಾತ್ರೆ ಮಾಡುವಾಗ ಎಲ್ಲರ ಜೊತೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ವಿಚಾರ ಅಪ್ರಸ್ತುತ. ಎಲ್ಲರೂ ಮೊದಲು ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
Tumakuru Need to find the reason for Congress losing elections need to correct our mistakes says Congress leader G Parameshwara
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm