ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm