ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm