ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm